ಇಬ್ಬರು ಐಎಎಸ್ ಅಧಿಕಾರಿಗಳಿಗೆ ಅರೆಸ್ಟ್ ವಾರಂಟ್ ಜಾರಿ

ಬೆಂಗಳೂರು: ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ ಹಣ ಪಾವತಿಸದ ಹಿನ್ನೆಲೆಯಲ್ಲಿ ಇಬ್ಬರು ಐಎಎಸ್ ಅಧಿಕಾರಿಗಳಿಗೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ.

ಟಿ.ಕೆ. ಅನಿಲ್ ಕುಮಾರ್ ಮತ್ತು ಡಿ. ರಂದೀಪ್ ಅವರಿಗೆ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ. ಬೆಂಗಳೂರಿನ ವಾಣಿಜ್ಯ ನ್ಯಾಯಾಲಯದಿಂದ ಬಂಧನ ವಾರೆಂಟ್ ಜಾರಿ ಮಾಡಲಾಗಿದೆ.

2017ರಲ್ಲಿ ಟ್ಯಾಬ್ ಪೂರೈಕೆ ಮಾಡಿದ ಕಂಪನಿಗೆ 6.94 ಕೋಟಿ ರೂಪಾಯಿ ಬಾಕಿ ನೀಡಬೇಕಿತ್ತು, ಮಧ್ಯಸ್ಥಿಕೆದಾರರ ಆದೇಶದ ಹೊರತಾಗಿಯೂ ಬಾಕಿ ಪಾವತಿಸಿರಲಿಲ್ಲ. ಆದೇಶ ಜಾರಿಗೆ ತೇಜಸ್ಕೋ ಟೆಕ್ನೋ ಸಾಫ್ಟ್ ಅರ್ಜಿ ಸಲ್ಲಿಸಿದ್ದು ಹೀಗಾಗಿ ಇಬ್ಬರು ಐಎಎಸ್ ಅಧಿಕಾರಿಗಳ ಬಂಧನಕ್ಕೆ ವಾರೆಂಟ್ ಜಾರಿ ಮಾಡಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read