ಬೆಂಗಳೂರು : ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ ಕಾಂಗ್ರೆಸ್ ಸರ್ಕಾರ ತಾನು ಮಾಡಿದ ತಪ್ಪಿಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿದೆ. ಸಿಎಂ ಸಿದ್ದರಾಮಯ್ಯ
ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಬಿಜೆಪಿ ವಾಗ್ಧಾಳಿ ನಡೆಸಿದ್ದಾರೆ.
ಅವರು ಪ್ರಚಾರದ ತೆವಲಿಗೆ ಬಿದ್ದು RCB ವಿಜಯೋತ್ಸವ ಕಾರ್ಯಕ್ರಮವನ್ನು ವಿಧಾನಸೌಧದ ಮುಂಭಾಗ ಆಯೋಜನೆ ಮಾಡಿ 11 ಅಮಾಯಕ ಅಭಿಮಾನಿಗಳನ್ನು ಬಲಿ ಪಡೆದರು. ಕಾಲ್ತುಳಿತ ಪ್ರಕರಣಕ್ಕೆ ಪೊಲೀಸರೇ ಕಾರಣ ಎಂದು ರಾಜ್ಯ ಸರ್ಕಾರ, ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳಲು ನರಿ ಬುದ್ದಿ ತೋರಿಸಿದೆ. ಅಸಲಿಗೆ 11 ಜನರನ್ನು ಬಲಿ ಪಡೆದಿದ್ದು ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರೇ ಹೊರತು ಪೊಲೀಸರಲ್ಲ ಎಂದು ಬಿಜೆಪಿ ವಾಗ್ಧಾಳಿ ನಡೆಸಿದ್ದಾರೆ.
ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದಂತೆ @INCKarnataka ಸರ್ಕಾರ ತಾನು ಮಾಡಿದ ತಪ್ಪಿಗೆ ಮೂವರು ಐಪಿಎಸ್ ಅಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಿದೆ.
— BJP Karnataka (@BJP4Karnataka) June 24, 2025
ಸಿಎಂ @siddaramaiah ಹಾಗೂ ಡಿಸಿಎಂ @DKShivakumar ಅವರು ಪ್ರಚಾರದ ತೆವಲಿಗೆ ಬಿದ್ದು RCB ವಿಜಯೋತ್ಸವ ಕಾರ್ಯಕ್ರಮವನ್ನು ವಿಧಾನಸೌಧದ ಮುಂಭಾಗ ಆಯೋಜನೆ ಮಾಡಿ 11 ಅಮಾಯಕ… pic.twitter.com/4w5sEG4ONS