ವರ್ಗಾವಣೆಗೆ ಹಣ ಪಡೆದಿದ್ದರೆ ದಾಖಲೆ ತೋರಿಸಲಿ : ಯತೀಂದ್ರ ಸಿದ್ದರಾಮಯ್ಯ ಸವಾಲ್

ಸಿಂಧನೂರು : ನಾವು ವರ್ಗಾವಣೆಗೆ ಹಣ ಪಡೆದಿದ್ದರೆ ದಾಖಲೆ ತೋರಿಸಲಿ ಎಂದು ಯತೀಂದ್ರ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ ‘ಅಧಿಕಾರಿಗಳ ವರ್ಗಾವಣೆಗಾಗಿ ಹಣ ಪಡೆದಿದ್ದೇನೆಂದು ವಿಪಕ್ಷಗಳು ಆರೋಪಿಸಿರುವುದರಲ್ಲಿ ಯಾವುದೇ ಸತ್ಯವಿಲ್ಲ, ಸುಖಾ ಸುಮ್ಮನೆ ವಿಪಕ್ಷಗಳು ಆರೋಪ ಮಾಡುತ್ತಿದೆ. ವಿಪಕ್ಷಗಳು ಇದನ್ನೇ ತಿರುಚುವ ಕೆಲಸ ಮಾಡಬಾರದು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ನಾನು ಸೂಪರ್ ಸಿಎಂ ಆಗಿದ್ದೇನೆಂದು ಆರೋಪ ಮಾಡುತ್ತಿದೆ, ವಿರೋಧ ಪಕ್ಷಗಳು ಹತಾಶರಾಗಿ ಗೂಬೆ ಕೂರಿಸುವ ಕೆಲಸ ಮಾಡುತ್ತಿವೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ದೇಶದ ಜನತೆ ಆಶೀರ್ವದಿಸಲಿದ್ದಾರೆ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read