ರಾಜ್ಯ ವಕ್ಪ್ ಮಂಡಳಿಯಲ್ಲೂ ಹಣ ಅಕ್ರಮ ವರ್ಗಾವಣೆ

ಬೆಂಗಳೂರು: ರಾಜ್ಯ ವಕ್ಸ್ ಮಂಡಳಿಯಲ್ಲಿ ಹಣ ಅಕ್ರಮ ವರ್ಗಾವಣೆ ಆರೋಪ ಕೇಳಿ ಬಂದಿದೆ. ಮಾಜಿ ಸಿಇಒ ಜುಲ್ಫಿಕಾರುಲ್ಲಾ ವಿರುದ್ಧ ಮುಖ್ಯ ಲೆಕ್ಕಾಧಿಕಾರಿ ಮೀರ್ ಅಹಮದ್ ಹೈಗ್ರೌಂಡ್ಸ್ ಠಾಣೆಗೆ ದೂರು ನೀಡಿದ್ದಾರೆ.

ದೂರಿನ ಅನ್ವಯ ಎಫ್ಐಆರ್ ದಾಖಲಿಸಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಆಸ್ತಿ ಮಾರಾಟ ಸಂಬಂಧ 4 ಕೋಟಿ ರೂಪಾಯಿ ಮಂಡಳಿ ಖಾತೆಗೆ ಬಂದಿತ್ತು. 2016ರಲ್ಲಿ ಚಿಂತಾಮಣಿಯ ವಿಜಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡಲಾಗಿದೆ. ಸಿಇಒ ಹೆಸರಿನಲ್ಲಿ ಎರಡು ಚೆಕ್ ಮೂಲಕ ಹಣ ವರ್ಗಾಯಿಸಲಾಗಿದೆ.

ಮಂಡಳಿ ಗಮನಕ್ಕೆ ತಾರದೇ ಜುಲ್ಫಿಕಾರುಲ್ಲಾ 8 ಕೋಟಿ ರೂ. ನಷ್ಟ ಮಾಡಿದ್ದಾರೆ ಎಂದು ದೂರು ನೀಡಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read