ಚಿಕ್ಕಬಳ್ಳಾಪುರ : ಜುಲೈ2 ರಂದು ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಹಲವು ಮಹತ್ವದ ನಿರ್ಣಯ ಘೋಷಣೆಯಾಗಲಿದೆ.
ಜುಲೈ 2 ರಂದು ಚಿಕ್ಕಬಳ್ಳಾಪುರದಲ್ಲಿರುವ ನಂದಿಬೆಟ್ಟದಲ್ಲಿ ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ನಂದಿಬೆಟ್ಟದ ಮಯೂರ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಈ ವೇಳೆ ಸಿಎಂ , ಡಿಸಿಎಂ, ಸಚಿವರು, ಶಾಸಕರು ಹಾಜರಿರಲಿದ್ದಾರೆ. ಇದೇ ಮೊದಲ ಬಾರಿಗೆ ನಂದಿಬೆಟ್ಟದಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.
ಪಡಿತರ ಚೀಟಿದಾರರಿಗೆ ನೀಡುತ್ತಿರುವ ಹೆಚ್ಚುವರಿ 5 ಕೆಜಿ ಅಕ್ಕಿ ಬದಲು ಆಹಾರದ ಕಿಟ್ ನೀಡಲು ಆಹಾರ ಇಲಾಖೆಯಿಂದ ಪ್ರಸ್ತಾವನೆ ಬಂದಿದೆ. ಸಚಿವ ಸಂಪುಟದಲ್ಲಿ ಇದಕ್ಕೆ ಒಪ್ಪಿಗೆ ಸಿಕ್ಕಿದರೆ ಸದ್ಯದಲ್ಲೇ ಜಾರಿಗೆ ತರುವ ಸಾಧ್ಯತೆಯಿದೆ. ಜುಲೈ 2 ರಂದು ನಂದಿಬೆಟ್ಟದಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
TAGGED:ನಂದಿಬೆಟ್ಟ