ಬೆಂಗಳೂರು: 2026ನೇ ಮಾರ್ಚ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ಹಾಜರಾಗುವ ವಿದ್ಯಾರ್ಥಿಗಳನ್ನು ನೋಂದಾಯಿಸಲು ದಿನಾಂಕ ವಿಸರಣೆ ಮಾಡಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮತ್ತೆ ದಿನಾಂಕ ವಿಸ್ತರಿಸಿದ್ದು, ನವೆಂಬರ್ 29 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ-1 ನೋಂದಾಯಿಸಿಕೊಳ್ಳಬಹುದಾಗಿದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ ಶಾಲೆಗಳ ವಿದ್ಯಾರ್ಥಿಗಳು, ಖಾಸಗಿ ಅಭ್ಯರ್ಥಿಗಳು, ಪುನರಾವರ್ತಿತ ವಿದ್ಯಾರ್ಥಿಗಳು ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಲಾಗಿದೆ.
ರಾಜ್ಯದ ಕೆಲವು ಶಾಲೆಗಳು ಮತ್ತು ಪೋಷಕರಿಂದ ನೋಂದಣಿ ಕಾಲಾವಕಾಶ ವಿಸ್ತರಣೆಗೆ ಮನವಿ ಬಂದ ಹಿನ್ನೆಲೆಯಲ್ಲಿ ದಿನಾಂಕ ವಿಸ್ತರಿಸಲಾಗಿದೆ. ಇದು ಕೊನೆಯ ಅವಕಾಶವಾಗಿದೆ ಎಂದು ಮಂಡಳಿ ತಿಳಿಸಿದೆ.


