ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ : ಶಿಷ್ಯವೇತನಕ್ಕೆ ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ

ಬಳ್ಳಾರಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯದ ಕಾನೂನು ಪದವೀಧರರ ವೃತ್ತಿ ತರಬೇತಿ ಶಿಷ್ಯವೇತನಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿಲಾಗಿದ್ದು, ಅರ್ಜಿ ಸಲ್ಲಿಸುವ ದಿನಾಂಕವನ್ನು ಡಿ.15 ರವರೆಗೆ ವಿಸ್ತರಿಸಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ಹತ್ತಿರದ ಮೌಲನಾ ಆಜಾದ್ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಕಚೇರಿ ಅಥವಾ ಬಳ್ಳಾರಿ ಕಚೇರಿ ದೂ.08392-245755, ಮೊ.8310321101, ಸಿರುಗುಪ್ಪ-9148889975, ಸಂಡೂರು-9036925966 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read