ರೈತರಿಗೆ ಕೃಷಿ ಇಲಾಖೆಯಿಂದ ಮಹತ್ವದ ಮಾಹಿತಿ

ಬಳ್ಳಾರಿ : ಪ್ರಸ್ತಕ ಸಾಲಿನ ಮುಂಗಾರು ಹಂಗಾಮು ಪ್ರಾರಂಭವಾಗುತ್ತಿರುವುದರಿಂದ ರೈತರು ಬೇಸಿಗೆ ಹಂಗಾಮಿನಲ್ಲಿ ಬೆಳೆದ ಭತ್ತದ ಬೆಳೆಯ ಕೊಯಿಲಿನ ನಂತರ ಮಾಗಿ ಉಳುಮೆ ಮಾಡಿ, ಹಸಿರೆಲೆ ಗೊಬ್ಬರ ಬೆಳೆದು ತಮ್ಮ ಜಮೀನುಗಳಿಗೆ ಸೇರಿಸಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್ ಅವರು ತಿಳಿಸಿದ್ದಾರೆ.

ಹಸಿರೆಲೆ ಗೊಬ್ಬರ ಒಂದು ಪ್ರಮುಖ ಕೃಷಿ ತಂತ್ರಜ್ಞಾನವಾಗಿದ್ದು, ಇದು ಮಣ್ಣಿನ ಆರೋಗ್ಯವನ್ನು ಸುಧಾರಿಸಲು ಮತ್ತು ಬೆಳೆಗಳ ಉತ್ಪಾದಕತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಹಸಿರೆಲೆ ಗೊಬ್ಬರವು ಮಣ್ಣಿಗೆ ಸಾವಯವ ಪದಾರ್ಥಗಳನ್ನು ಸೇರಿಸುವ ಮೂಲಕ ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಇದು ಮಣ್ಣಿನ ರಚನೆಯನ್ನು ಸುಧಾರಿಸುತ್ತದೆ. ನೀರನ್ನು ಹಿಡಿದಿಡಲು ಸಹಾಯ ಮಾಡುತ್ತದೆ ಮತ್ತು ಸಸ್ಯಗಳಿಗೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸುತ್ತದೆ.

ಹಸಿರೆಲೆ ಗೊಬ್ಬರವು ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸುತ್ತದೆ. ಸಸ್ಯಗಳಿಗೆ ಅಗತ್ಯವಿರುವ ಪೋಷಕಾಂಶಗಳನ್ನು ಒದಗಿಸಲು ಸಹಾಯ ಮಾಡುತ್ತದೆ. ಹಸಿರೆಲೆ ಗೊಬ್ಬರವು ಮಣ್ಣಿಗೆ ನೈಟ್ರೋಜನ್, ಫಾಸ್ಫರಸ್ ಮತ್ತು ಪೊಟ್ಯಾಶ್ ನಂತಹ ಪೋಷಕಾಂಶಗಳನ್ನು ಸೇರಿಸುತ್ತದೆ ಮತ್ತು ಬೆಳೆಗಳ ಬೆಳವಣಿಗೆಗೆ ಸಹಾಯ ಮಾಡುತ್ತದೆ.
ಒಂದು ಎಕರೆ ಪ್ರದೇಶದಲ್ಲಿ ಸೆಣಬು ಬೆಳೆಯುವುದರಿಂದ 8 ಟನ್ ಗಳಷ್ಟು ಸಾವಯವ ಗೊಬ್ಬರವನ್ನು ಭೂಮಿಗೆ ಸೇರಿಸಬಹುದು. ಅದೇ ರೀತಿ ಒಂದು ಎಕರೆ ಪ್ರದೇಶದಲ್ಲಿ ಡಹೇನ್ಚಾ ಬೆಳೆಯುವುದರಿಂದ 6 ಟನ್ ಗಳಷ್ಟು ಸಾವಯವ ಗೊಬ್ಬರವನ್ನು ಭೂಮಿಗೆ ಸೇರಿಸಬಹುದು.

ಬೇಸಿಗೆ ಹಂಗಾಮಿನ ಭತ್ತದ ಬೆಳೆಯ ಕಟಾವಿನ ನಂತರ ಸೆಣಬು ಅಥವಾ ಡಹೇನ್ಚಾ ಬೀಜಗಳನ್ನು ಹೊಲಕ್ಕೆ ಉದಿರಿಸಿದಾಗ ಭೂಮಿಯಲ್ಲಿರುವ ತೇವಾಂಶವನ್ನು ಉಪಯೋಗಿಸಿಕೊಂಡು ಬೆಳೆಯುತ್ತದೆ. ಸುಮಾರು 40 ರಿಂದ 45 ದಿನಗಳ ನಂತರ (ಹೂಹಾಡುವುಕ್ಕಿಂತ ಮುಂಚೆ) ನೆಲಕ್ಕೆ ಸೆರಿಸಿದರೆ, ಕೊಳೆತು ಸಾವಯವ ಗೊಬ್ಬರವಾಗುತ್ತದೆ.
ಹಾಗಾಗಿ ರೈತರು ಕಡಿಮೆ ಖರ್ಚು ಮಾಡಿ ಹಸಿರೆಲೆಗೊಬ್ಬರವನ್ನು ತಮ್ಮ ಜಮೀನುಗಳಿಗೆ ಸೇರಿಸಿ ಹೆಚ್ಚಿನ ಇಳುವರಿಯನ್ನು ಪಡೆದುಕೊಂಡು ತಮ್ಮ ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು ಎಂದು ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read