Cabinet Meeting : ಇಂದು ಬೆಳಗ್ಗೆ 11 ಗಂಟೆಗೆ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿ

ಬೆಂಗಳೂರು : ಇಂದು ಬೆಳಗ್ಗೆ 11 ಗಂಟೆಗೆ (ಜೂನ್ 28) ರಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.

ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಕೊಠಡಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಮಂತ್ರಿಮಂಡಲದ ಸಚಿವರು, ಶಾಸಕರು, ಅಧಿಕಾರಿಗಳು ಹಾಜರಿರಲಿದ್ದಾರೆ. ಗ್ಯಾರಂಟಿ ಯೋಜನೆಗಳ ಸಂಬಂಧ ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ಹಾಗೂ ವಿಧಾನಮಂಡಲ ಅಧಿವೇಶನ ಹಾಗೂ ಬಜೆಟ್ ಹಿನ್ನೆಲೆ ಸಚಿವ ಸಂಪುಟ ಸಭೆ ಬಹಳ ಮಹತ್ವ ಪಡೆದಿದೆ.

ರಾಜ್ಯ ರಾಜಕಾರಣದಲ್ಲಿ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಭಾರೀ ಚರ್ಚೆಯಾಗುತ್ತಿದ್ದು, ಇದರ ನಡುವೆ ಸಚಿವ ಸಂಪುಟ ಸಭೆ ಬಹಳ ಮಹತ್ವ ಪಡೆದಿದೆ. ಗೃಹಲಕ್ಷ್ಮಿ, ಗೃಹಜ್ಯೋತಿ ಜಾರಿ ಸಂಬಂಧ ಚರ್ಚೆ ನಡೆಯಲಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read