ಬೆಂಗಳೂರು: ಕೇಂದ್ರದಿಂದ ಮಾರ್ಗಸೂಚಿ ಬಂದ ನಂತರ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಸಚಿವ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಕೋವಿಡ್ ನಿಯಂತ್ರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಬಳಿಕ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಅಭಿಪ್ರಾಯ ಪಡೆದುಕೊಂಡು ಲಸಿಕೆ ನೀಡಲಾಗುವುದು. ಕೊರೋನಾ ಲಕ್ಷಣ ಇರುವ ಮಕ್ಕಳಿಗೆ ರಾಜ್ಯ ನೀಡಲು ಸೂಚನೆ ನೀಡಲಾಗಿದೆ. ಶಾಲೆಯ ಆಡಳಿತ ಮಂಡಳಿಗಳು ಕೂಡ ಗಮನಹರಿಸಬೇಕು. ಟೆಸ್ಟಿಂಗ್ ವಿಚಾರದಲ್ಲಿ ಹಳೆಯ ಪದ್ಧತಿ ಅನುಸರಿಸುತ್ತೇವೆ. ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.
ಲಸಿಕೆ ನೀಡುವ ಬಗ್ಗೆ ಕೇಂದ್ರದ ಅಭಿಪ್ರಾಯ ಪಡೆದು ವರದಿ ನೀಡಲು ಸಿಎಂ ಹೇಳಿದ್ದಾರೆ. ವೈದ್ಯರು, ಸಿಬ್ಬಂದಿಗೆ ರಜೆ ಮೇಲೆ ಹೋಗದಂತೆ ಸೂಚನೆ ನೀಡಲಾಗಿದೆ. ಎಲ್ಲರಿಗೂ ಕೊರೋನಾ ಟೆಸ್ಟ್ ಮಾಡುವ ಅಗತ್ಯವಿಲ್ಲ. ಸೋಂಕಿನ ಲಕ್ಷಣ ಇರುವವರಿಗೆ ಮಾತ್ರ ಟೆಸ್ಟ್ ಮಾಡುತ್ತೇವೆ. ವಿದೇಶದಿಂದ ಬಂದವರಿಗೆ ಯಾವುದೇ ಟೆಸ್ಟಿಂಗ್ ಇರಲ್ಲ. ಕೋವಿಡ್ ನಿಯಂತ್ರಣಕ್ಕೆ ನಾವು ತಯಾರಾಗಿದ್ದೇವೆ. ಬಾಣಂತಿಯರು, ಮಕ್ಕಳು, 50 ವರ್ಷ ಮೇಲ್ಪಟ್ಟವರು, ವಿವಿಧ ಕಾಯಿಲೆ ಇರುವವರು ಮಾಸ್ಕ್ ಧರಿಸಬೇಕು ಎಂದು ಸಿಎಂ ನೇತೃತ್ವದಲ್ಲಿ ನಡೆದ ಸಭೆಯ ಬಳಿಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ,