ವಿಶ್ವಕಪ್ ನಲ್ಲಿ ಭಾರತ ಸೋಲಿನ ಆಘಾತ: ಆತ್ಮಹತ್ಯೆಗೆ ಶರಣಾದ ಯುವಕ

ಕೊಲ್ಕೊತ್ತಾ: ಭಾರತ ವಿಶ್ವಕಪ್ ಫೈನಲ್‌ ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ನಂತರ 23 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅವರ ಕುಟುಂಬ ತಿಳಿಸಿದೆ.

ಘಟನೆ ಭಾನುವಾರ ರಾತ್ರಿ 11 ಗಂಟೆಯ ಸುಮಾರಿಗೆ ಪಶ್ಚಿಮ ಬಂಗಾಳದ ಬಂಕುರಾ ಜಿಲ್ಲೆಯ ಬೆಲಿಯತೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಸಿನಿಮಾ ಹಾಲ್ ಬಳಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. .

ರಾಹುಲ್ ಲೋಹರ್ ಅವರು ಈ ಪ್ರದೇಶದ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದು, ಫೈನಲ್ ಪಂದ್ಯ ವೀಕ್ಷಿಸಲು ಭಾನುವಾರ ರಜೆ ತೆಗೆದುಕೊಂಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಭಾರತ ಸೋಲಿನಿಂದ ಮನನೊಂದ ಅವರು ತಮ್ಮ ಕೋಣೆಯಲ್ಲಿ ನೇಣು ಹಾಕಿಕೊಂಡಿದ್ದಾರೆ ಎಂದು ಅವರ ಸೋದರಮಾವ ಉತ್ತಮ್ ಸುರ್ ತಿಳಿಸಿದ್ದು, ಉಳಿದಂತೆ ಅವರ ಜೀವನದಲ್ಲಿ ಅಂತಹ ಯಾವುದೇ ಸಮಸ್ಯೆಗಳಿರಲಿಲ್ಲ ಎಂದು ಅವರು ಹೇಳಿದರು.

ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸೋಮವಾರ ಬೆಳಗ್ಗೆ ಬಂಕುರಾ ಸಮ್ಮಿಲಾನಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದ್ದು, ಅಸ್ವಾಭಾವಿಕ ಸಾವಿನ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read