BIG NEWS : ಈಶ್ವರ್ ಖಂಡ್ರೆ ಪುತ್ರ ‘ಸಾಗರ್ ಖಂಡ್ರೆ’ ಮುಸ್ಲಿಂ ವೋಟ್ ಗಳಿಂದಲೇ ಗೆದ್ದಿರೋದು : ವಿವಾದ ಸೃಷ್ಟಿಸಿದ ಸಚಿವ ಜಮೀರ್..!

ಬೀದರ್ : ಸಚಿವ ಈಶ್ವರ್ ಖಂಡ್ರೆ ಪುತ್ರ ‘ಸಾಗರ್ ಖಂಡ್ರೆ’ ಮುಸ್ಲಿಂ ವೋಟ್ ಗಳಿಂದಲೇ ಗೆದ್ದಿರೋದು ಎಂದು ಸಚಿವ ಜಮೀರ್ ಅಹಮದ್ ಖಾನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಬೀದರ್ ನಲ್ಲಿ ನಡೆದ ವಕ್ಫ್ ಅದಾಲತ್ ನಲ್ಲಿ ಮಾತನಾಡಿದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಕ್ಫ್ ಸಚಿವ ಜಮೀರ್, ಸಿರ್ಪ್ ಔರ್ ಸಿರ್ಪ್ ಮುಸ್ಲಿಂ ಓಟ್ಸೆ ಸಾಗರ್ ಖಂಡ್ರೆ ಜೀತೆ ಸೋ ಹೈ. (ಕೇವಲ ಅಂದರೆ ಕೇವಲ ಮುಸ್ಲಿಂಮರ ಮತದಿಂದ ಸಾಗರ್ ಖಂಡ್ರೆ ಗೆದ್ದಿದ್ದಾನೆ) ಹಮಾರಾ ಕಾಮ್ ಝಕ್ ಮಾರ್ಕೆ ಕರ್ನಾ ಪಡ್ತಾ ಹೈ. (ನಮ್ಮ ಕೆಲಸವನ್ನು ತಲೆ ಬಗ್ಗಿಸಿಕೊಂಡು ಅವನು ಮಾಡಬೇಕು) ಎಂದು ಹೇಳಿಕೆ ನೀಡಿದ್ದಾರೆ.’

ಸಚಿವ ಈಶ್ವರ್ ಖಂಡ್ರೆ ಪುತ್ರ ‘ಸಾಗರ್ ಖಂಡ್ರೆ’ ಮುಸ್ಲಿಂ ಮತಗಳಿಂದಲೇ ಗೆದ್ದಿರೋದು ಎಂದು ಹೇಳಿಕೆ ನೀಡಿದ್ದು , ಈ ವಿಚಾರ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಖಂಡ್ರೆಗೆ ಮುಸ್ಲಿಮರು ಮಾತ್ರ ಓಟು ಹಾಕಿದ್ದಾ.? ಹಿಂದೂಗಳು ಹಾಕಿಲ್ವಾ ಎಂದು ಸೋಶಿಯಲ್ ಮೀಡಿಯಾದಲ್ಲಿ ಹಲವರು ಆಕ್ರೋಶ ಹೊರ ಹಾಕಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read