ಹಾವೇರಿ ಜಿಲ್ಲೆಯಲ್ಲಿ ರಾಜಾರೊಷವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದು ಅಕ್ರಮ ಚಟುವಟಿಕೆಗಳಿಗೆ ಪೊಲೀಸರೆ ಸಾಥ್ ನೀಡುತ್ತಿದ್ದಾರಾ ಎನ್ನುವ ಅನುಮಾನ ಜನರಿಗೆ ಮೂಡುತ್ತಿದೆ ಎಂದು ಸಂಸದ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಹಗಲು ಹೊತ್ತಿನಲ್ಲಿಯೇ ಇಷ್ಟೊಂದು ಬಹಿರಂಗವಾಗಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಸಾರ್ವಜನಿಕರು, ಮಾಧ್ಯಮಗಳು ಪೊಲೀಸರ. ಗಮನಕ್ಕೆ ತಂದರೂ ಯಾವುದೇ ಕ್ರಮ ಕೈಗೊಳ್ಳದೆ. ಮೂಕ ಪ್ರೇಕ್ಷರಾಗಿರುವುದನ್ನು ನೋಡಿದರೆ, ಅಕ್ರಮ ಮಾಡುವವರಿಗೆ ಸರ್ಕಾರವೇ ಶ್ರೀರಕ್ಷೆಯಾಗಿ ನಿಂತಿದೆ ಎಂಬ ಭಾವನೆ ಮೂಡುತ್ತದೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹಾವೇರಿ ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿರುವ ಬಗ್ಗೆ ಪೊಲಿಸ್ ಇಲಾಖೆಯ ಗಮನಕ್ಕೆ ತಂದರೂ ಪೊಲಿಸರು ನಿರ್ಲಕ್ಷ್ಯ ತೋರುತ್ತಿದ್ದು, ರಾಜಾರೋಷವಾಗಿ ಇಸ್ಪೀಟ್ ಆಡುತ್ತಿರುವವರ ಮೇಲೆ ತಕ್ಷಣ ಕ್ರಮ ಕೈಗೊಳ್ಳದಿದ್ದರೆ. ಹಾವೇರಿ ಎಸ್ಪಿ ಕಚೇರಿ ಎದರು ಉಗ್ರ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ರಾಜಾರೊಷವಾಗಿ ಇಸ್ಪೀಟ್ ದಂಧೆ ನಡೆಯುತ್ತಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದು ಅಕ್ರಮ ಚಟುವಟಿಕೆಗಳಿಗೆ ಪೊಲೀಸರೆ ಸಾಥ್ ನೀಡುತ್ತಿದ್ದಾರಾ ಎನ್ನುವ ಅನುಮಾನ ಜನರಿಗೆ ಮೂಡುತ್ತಿದೆ.
— Basavaraj S Bommai (@BSBommai) October 14, 2025
ಹಗಲು ಹೊತ್ತಿನಲ್ಲಿಯೇ ಇಷ್ಟೊಂದು ಬಹಿರಂಗವಾಗಿ ಇಸ್ಪೀಟ್ ಆಡುತ್ತಿರುವ ಬಗ್ಗೆ ಸಾರ್ವಜನಿಕರು, ಮಾಧ್ಯಮಗಳು ಪೊಲೀಸರ. ಗಮನಕ್ಕೆ… pic.twitter.com/RVDoA2VMS7