BIG UPDATE : ‘ವರ್ತೂರು ಸಂತೋಷ್’ ಧರಿಸಿದ್ದು ‘ಹುಲಿ ಉಗುರು’ ಎಂದು ಸಾಬೀತಾಗಿದೆ : ಡಿಸಿಎಫ್ ರವೀಂದ್ರ ಸ್ಪಷ್ಟನೆ

ಬೆಂಗಳೂರು : ಇತಿಹಾಸದಲ್ಲೇ ಇದೇ ಮೊದಲು ಕನ್ನಡದ ಬಿಗ್ ಬಾಸ್ ಸೀಜನ್-10ರ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಿಗ್ ಬಾಸ್ ಮನೆಯಿಂದಲೇ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ. ಹುಲಿ ಉಗುರು ಧರಿಸಿರುವ ಆರೋಪದ ಮೇಲೆ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಯುತ್ತಿದೆ.

ಈ ಬಗ್ಗೆ ಡಿಸಿಎಫ್ ರವೀಂದ್ರ ಸ್ಪಷ್ಟನೆ ನೀಡಿದ್ದು, ವರ್ತೂರು ಸಂತೋಷ್ ಧರಿಸಿದ್ದು ಹುಲಿ ಉಗುರು ಎಂಬುದು ಖಚಿತವಾಗಿದೆ. ಬಿಗ್ ಬಾಸ್ ಮನೆಗೆ ಹೋಗಿ ನಾವು ಅವರನ್ನು ಬಂಧಿಸಿದ್ದೇವೆ,ಹಣ ಕೊಟ್ಟು ಖರೀದಿಸಿದ ಬಗ್ಗೆ ಮಾಹಿತಿಯಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿಸಿಎಫ್ ರವೀಂದ್ರ ಹೇಳಿದ್ದಾರೆ.

ಬಿಗ್ ಬಾಸ್ ಸ್ಪರ್ಧಿ ಸಂತೋಷ್ ಕತ್ತಿನಲ್ಲಿ ಚೈನು ಹಾಕಿಕೊಂಡಿದ್ದು, ಅದರಲ್ಲಿ ಹುಲಿ ಉಗುರು ಇದೆ . ಹುಲಿ ಉಗುರು ಧರಿಸಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಸಂತೋಷ್ ಅವರನ್ನು ಬಂಧಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read