‘ಗ್ಯಾರಂಟಿ ಯೋಜನೆ’ ವಿರೋಧಿಸಿದ ಪ್ರಧಾನಿ ಮೋದಿಯೇ ಗ್ಯಾರಂಟಿ ಯೋಜನೆ ಘೋಷಿಸಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ಧಾಳಿ

ಕೊಪ್ಪಳ : ಗ್ಯಾರಂಟಿ ಯೋಜನೆ ವಿರೋಧಿಸಿದ ಪ್ರಧಾನಿ ಮೋದಿಯೇ ಗ್ಯಾರಂಟಿ ಘೋಷಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದ್ದಾರೆ.

ಕೊಪ್ಪಳದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು. BJP ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಗ್ಯಾರಂಟಿ ಜಾರಿ ಅಂತಿದ್ದಾರೆ. ಬಿಜೆಪಿ ಯಾವತ್ತೂ ನುಡಿದಂತೆ ನಡೆಯಲ್ಲ. ಬಿಜೆಪಿಯವರು ಏನೇ ಹೇಳಿದ್ರು ಕೂಡ ಜನರು ನಂಬುವುದಿಲ್ಲ ಎಂದು ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ಕುಮಾರಸ್ವಾಮಿ ವಿರುದ್ಧ ವಾಗ್ಧಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ ಇಲ್ಲಿಯವರೆಗೆ ತಮ್ಮ ವಿರುದ್ಧ ಯಾವುದೇ ಸುಳ್ಳು ಆರೋಪಗಳನ್ನು ಕುಮಾರಸ್ವಾಮಿ ಸಾಬೀತುಪಡಿಸಿಲ್ಲ. ಅವರು ಯಾವುದಾದರೂ ದಾಖಲೆಗಳನ್ನು ನೀಡಿದ್ದಾರೆಯೇ? ಅವರು ಹಿಟ್ ಅಂಡ್ ರನ್ ಕೇಸ್ ಆಗಿದ್ದು, ಬಿಜೆಪಿಯವರ ಒತ್ತಾಯದ ಮೇರೆಗೆ ನನ್ನ ಮತ್ತು ಶಿವಕುಮಾರ್ ಮೇಲೆ ದಾಳಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read