BIG NEWS: ಇಂದು ಹುಬ್ಬಳ್ಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಆಗಮನ

ಹುಬ್ಬಳ್ಳಿ: ಒಂದೆಡೆ ಲೋಕಸಭಾ ಚುನಾವಣಾ ಕಾವು ಏರುತ್ತಿದೆ. ಮತ್ತೊಂದೆಡೆ ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಪ್ರಕ್ರಣ ಖಂಡಿಸಿ ಹಂತಕನಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳ ಪ್ರತಿಭಟನೆ ಜೋರಾಗಿದೆ. ಈ ಸಂದರ್ಭದಲ್ಲಿಯೇ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಇಂದು ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಹುಬ್ಬಳ್ಳಿಗೆ ಭೇಟಿ ನೀಡಲಿರುವ ಜೆ.ಪಿ.ನಡ್ಡಾ ವಿವಿಧ ಪ್ರಚಾರ ಸಭೆಗಳಲ್ಲಿ ಭಾಗವಹಿಸಲಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಹುಬ್ಬಳ್ಳಿಗೆ ಆಗಮಿಸಲಿರುವ ಜೆ.ಪಿ.ನಡ್ಡಾ, ರಾತ್ರಿ 10 ಗಂಟೆಯವರೆಗೂ ಚುನಾವಣಾ ಪ್ರಚಾರದಲ್ಲಿ ತೊಡಗಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯ ಡೆನಿಸನ್ ಹೋಟೆಲ್ ನಲ್ಲಿ ವಿವಿಧ ಸಮುದಾಯಗಳ ಮುಖಂಡರನ್ನು ಭೇಟಿಯಾಗಲಿದ್ದಾರೆ. ಬಳಿಕ ವಿದ್ಯಾನಗರದ ಸಾಖರೆ ಶಾಲೆಯಲ್ಲಿ ಪ್ರಚಾರ ಸಭೆಯಲ್ಲಿ ಭಾಗವಹಿಸಲಿದ್ದು, ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಪರ ಮತಯಾಚಿಸಲಿದ್ದಾರೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read