ಹೈದರಾಬಾದ್: ಆಂಧ್ರಪ್ರದೇಶ ಮಾಜಿ ಸಿಎಂ ಜಗನ್ ಮೋಹನ್ ರೆಡ್ದಿ ರ್ಯಾಲಿ ವೇಳೆ ಅವರ ಕಾರಿನ ಚಕ್ರದಡಿ ಸಿಲುಕಿ ವೃದ್ಧ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಗನ್ ವಿರುದ್ಧ ಪ್ರಕರಣ ದಾಖಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಜಗನ್ ಕಾರು ಚಾಲಕ ರಮಣ ರೆಡ್ಡಿಯನ್ನು ಪೊಲೀಸರು ಬಂಧಿಸಿದ್ದಾರೆ. ಜಗನ್ ಹಾಗೂ ಕಾರು ಮಾಲೀಕ ಕೃಷ್ಣ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕಾರು ಚಾಲಕ ರಮಣ ರೆಡ್ಡಿ ಎ1 ಆರೋಪಿ, ಜಗನ್ ರೆಡ್ದಿ ಎ2 ಹಾಗೂ ಕಾರು ಮಾಲೀಕ ಎ3 ಎಂದು ಪರಿಗಣಿಸಲಾಗಿದೆ. ಸದ್ಯ ಕಾರು ಚಾಲಕ ರಮಣ ರೆಡ್ಡಿ ಅರೆಸ್ಟ್ ಆಗಿದ್ದಾರೆ.
ಪಲ್ನಾಡು ಜಿಲ್ಲೆಯ ಸತ್ತೇನಹಳ್ಳಿಯಲ್ಲಿ ಮಾಜಿ ಸಿಎಂ ಜಗನ್, ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ರ್ಯಾಲಿ ಆಯೋಜಿಸಲಾಗಿತ್ತು. ಈ ವೇಳೆ ಅವರ ಕಾರಿನ ಚಕ್ರದಡಿ ಸಿಲುಕಿ ವೃದ್ಧ ವೃದ್ಧರೊಬ್ಬರು ಸಾವನ್ನಪ್ಪಿದ್ದರು. ಜೂನ್ 18ರಂದು ನಡೆದಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಂದು ರ್ಯಾಲಿ ವೇಳೆ ಕಾರ್ಯಕರ್ತರ ನಡುವೆ ನೂಕಾಟ, ತಳ್ಳಾಟ ನಡೆದಿದೆ. ಈ ವೇಳೆ ವೃದ್ಧರೊಬ್ಬರು ಕೆಳಗೆ ಬಿದ್ದಿದ್ದು, ಅವರ ಮೇಲೆಯೇ ಜಗನ್ ಕಾರು ಹಾದುಹೋಗಿದೆ. ಕಾರಿನ ಚಕ್ರದಡಿಗೆ ಸಿಲುಕಿ ವೃದ್ಧರು ಸಾವನ್ನಪ್ಪಿದ್ದಾರೆ. 70 ವರ್ಷದ ಸಂಗಯ್ಯ ಮೃತರು. ನೂಕಾಟ, ತಳ್ಳಾಟ, ಜೈಕಾರಗಳ ನಡುವೆ ವ್ಯಕ್ತಿಯೊಬ್ಬರು ಕಾರಿನ ಚಕ್ರದಡಿ ಸಿಲುಕಿ ಸಾವನ್ನಪ್ಪಿರುವುದೇ ಯಾರಿಗೂ ತಿಳಿದಿರಲಿಲ್ಲ. ಆದರೆ ಈ ಘಟನೆಯ ವಿಡಿಯೋ ಹೊರಬರುತ್ತಿದ್ದಂತೆ ಜಗನ್ ಕಾರಿನಡಿ ಸಿಲುಕಿ ವೃದ್ಧರಿಬ್ಬರು ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ.