BIG NEWS: ಜೈನಮುನಿ ಹತ್ಯೆ ಹಿಂದೆ ಉಗ್ರರ ಕೈವಾಡ ಶಂಕೆ ಎಂದ ಶಾಸಕ; ದಾಖಲೆಗಳಿದ್ದರೆ ಕೊಡಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣದ ಹಿಂದೆ ಉಗ್ರರ ಕೈವಾಡ ಶಂಕೆ ಇದೆ ಎಂದು ಬಿಜೆಪಿ ಶಾಸಕ ಸಿದ್ದು ಸವದಿ ಆರೋಪಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ ಖರ್ಗೆ, ಅಂತಹ ದಾಖಲೆಗಳಿದ್ದರೆ ಕೊಡಿ ಎಂದಿದ್ದಾರೆ.

ವಿಧಾನಸೌಧದಲ್ಲಿ ಶಾಸಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವ ಪ್ರಿಯಾಂಕ್ ಖರ್ಗೆ, ಜೈನಮುನಿ ಹತ್ಯೆ ಹಿಂದೆ ಐಸಿಸ್, ಉಗ್ರರ ಕೈವಾಡವಿದೆ ಎಂಬ ಅನುಮಾನವಿದ್ದರೆ ಅಂತಹ ದಾಖಲೆಗಳಿದ್ದರೆ ಕೊಡಿ. ಸೂಕ್ತ ತನಿಖೆ ನಡೆಸಲು ನಮ್ಮ ಪೊಲೀಸ್ ಇಲಾಖೆ ಸಮರ್ಥವಾಗಿದೆ. ಈ ನಿಟ್ಟಿನಲ್ಲಿ ತನಿಖೆ ನಡೆಯಲಿದೆ ಎಂದರು.

ಜೈನಮುನಿ ಹತ್ಯೆ ಹಿಂದೆ ಐಸಿಸ್ ಕೈವಾಡ ಶಂಕೆ ಇದೆ. ಸರ್ಕಾರ ಆರೋಪಿಗಳ ರಕ್ಷಣೆ ಮಾಡುತ್ತಿದೆ. ತನಿಖೆ ನಿಟ್ಟಿನಲ್ಲಿ ಸರ್ಕಾರದ ನಡೆ ಅನುಮಾನಾಸ್ಪದವಾಗಿದೆ ಎಂದು ಶಾಸಕ ಸಿದ್ದು ಸವದಿ ಆರೋಪಿಸಿದ್ದರು.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read