BREAKING NEWS: ಎನ್ ಕೌಂಟರ್ ನಲ್ಲಿ ಇಬ್ಬರು ಉಗ್ರರ ಹತ್ಯೆ

ಶ್ರೀನಗರ: ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅಲ್ಶಿಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ನಡೆದ ಎನ್‌ ಕೌಂಟರ್‌ ನಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹತ್ಯೆಗೀಡಾದ ಭಯೋತ್ಪಾದಕರನ್ನು ಮೊರಿಫತ್ ಮಕ್ಬೂಲ್ ಮತ್ತು ಅಬ್ರಾರ್ ಅಲಿಯಾಸ್ ಜಾಜಿಮ್ ಫಾರೂಕ್ ಎಂದು ಗುರುತಿಸಲಾಗಿದೆ. ಅವರು ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಭಾಗವಾಗಿದ್ದರು.

ಕಾಶ್ಮೀರಿ ಪಂಡಿತ್ ದಿವಂಗತ ಸಂಜಯ್ ಶರ್ಮಾ ಹತ್ಯೆಯಲ್ಲಿ ಭಯೋತ್ಪಾದಕ ಅಬ್ರಾರ್ ಭಾಗಿಯಾಗಿದ್ದಾನೆ ಎಂದು ಕಾಶ್ಮೀರ ಎಡಿಜಿಪಿ ಹೇಳಿದ್ದಾರೆ.

ಅಲ್ಶಿಪೋರಾ ಪ್ರದೇಶದಲ್ಲಿ ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಭದ್ರತಾ ಪಡೆಗಳು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದ ಬಳಿಕ ಎನ್‌ಕೌಂಟರ್ ಆರಂಭವಾಯಿತು ಎಂದು ಪೊಲೀಸರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read