BIG NEWS: ಮತ್ತೋರ್ವ ಶಂಕಿತ ಉಗ್ರನ ಮನೆ ಮೇಲೆ ಬಾಂಬ್ ದಾಳಿ: ಮನೆ ಸಂಪೂರ್ಣ ಧ್ವಂಸ

ಶ್ರೀನಗರ: ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ 28 ಜನರನ್ನು ಉಗ್ರರು ಬಲಿ ಪಡೆದ ಬೆನ್ನಲ್ಲೇ ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ಭಾರತೀಯ ಸೇನೆ ಚುರುಕುಗೊಳಿಸಿದೆ. ಜಮ್ಮು-ಕಾಶ್ಮೀರದಲ್ಲಿ ಉಗ್ರರ ಮನೆಗಳನ್ನು ನೆಲಸಮ ಮಾಡಲಗುತ್ತಿದೆ. ಈಗಾಗಲೇ 7 ಉಗ್ರರ ಮನೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ. ಇದರ ಬೆನ್ನಲ್ಲೇ ಮತ್ತೋರ್ವ ಶಂಕಿತ ಉಗ್ರನ ಮನೆಯನ್ನು ಬಾಂಬ್ ಸ್ಫೋಟಿಸಿ ಧ್ವಂಸ ಮಾಡಲಾಗಿದೆ.

ಜಮ್ಮು-ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಕಾಲಾರೂಸ್ ಪ್ರದೇಶದಲ್ಲಿ ಉಫ಼್ರ ಫಾರೂಕ್ ಅಹ್ಮದ್ ತಡ್ವಾ ನಿವಾಸದ ಮೇಲೆ ಅಧಿಕಾರಿಗಳು ಬಾಂಬ್ ದಾಳಿ ನಡೆಸಿದ್ದಾರೆ. ಮನೆ ಸಂಪೂರ್ಣ ನಾಶವಾಗಿದೆ.

ಭಯೋತ್ಪಾದಕ ಚಟುವಟಿಕೆಯಲ್ಲಿ ಭಾಗಿಯಾಗಿರುವ ಇಅತರರ ವಿರುದ್ಧವೂ ಇದೇ ರೀತಿ ಕ್ರಮ ಕೈಗೊಳ್ಳಲಗುವುದು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read