BIG NEWS: ಮೋದಿ ಮತ್ತೆ ಪ್ರಧಾನಿಯಾಗಲು ಬಿಜೆಪಿ ಜತೆ ಹೊಂದಾಣಿಕೆಗೆ ಸಿದ್ಧ: ಜನಾರ್ದನ ರೆಡ್ಡಿ

ಕೊಪ್ಪಳ: ಮೋದಿ ಮತ್ತೆ ಪ್ರಧಾನಿಯಾಗಲು ಬಿಜೆಪಿ ಜೊತೆ ಕೆ.ಆರ್.ಪಿ.ಪಿ. ಹೊಂದಾಣಿಕೆಗೆ ಸಿದ್ಧವಿದೆ ಎಂದು ಪಕ್ಷದ ಸಂಸ್ಥಾಪಕ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಮತ್ತೆ ಪ್ರಧಾನಿಯಾಗಲು ಹೊಂದಾಣಿಕೆಗೆ ಸಿದ್ದವಿದ್ದೇವೆ. ನಮ್ಮ ಪಕ್ಷದಿಂದ ಗೆದ್ದ ಮೇಲೆ ಬಿಜೆಪಿಗೆ ಬೆಂಬಲ ನೀಡುತ್ತೇವೆ. ಬಿಜೆಪಿ ನಾಯಕರು ನನ್ನೊಂದಿಗೆ ಚರ್ಚಿಸುತ್ತಿದ್ದಾರೆ. ಕೆ.ಆರ್.ಪಿ.ಪಿ.ಯಿಂದ ನಾಲ್ಕೈದು ಲೋಕಸಭೆ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದ್ದೇನೆ ಎಂದು ತಿಳಿಸಿದ್ದಾರೆ.

ಕಲ್ಯಾಣ ರಾಜ್ಯ ಪ್ರಗತಿಪಕ್ಷ ಸ್ಥಾಪಕ ಮತ್ತು ಶಾಸಕರಾದ ಜನಾರ್ದನ ರೆಡ್ಡಿ ಅವರನ್ನು ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಬಿಜೆಪಿ ಸೆಳೆಯಲು ಪ್ರಯತ್ನ ನಡೆಸಿದೆ. ಅವರ ಸೇರ್ಪಡೆಯಿಂದ ಕಲ್ಯಾಣ ಕರ್ನಾಟಕ ಭಾಗದ ಮೂರು, ನಾಲ್ಕು ಲೋಕಸಭಾ ಕ್ಷೇತ್ರದಲ್ಲಿ ಗೆಲುವಿಗೆ ಅನುಕೂಲವಾಗಲಿದೆ ಎಂಬ ಲೆಕ್ಕಾಚಾರ ಬಿಜೆಪಿಯದಾಗಿದ್ದು, ಜನಾರ್ದನ ರೆಡ್ಡಿ ಇನ್ನು ಒಪ್ಪಿಗೆ ಸೂಚಿಸಿಲ್ಲ. ಬಿಜೆಪಿಯಲ್ಲಿ ಕೆ.ಆರ್.ಪಿ.ಪಿ. ವಿಲೀನದ ಬದಲಿಗೆ ಹೊಂದಾಣಿಕೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read