ಕಾಂಗ್ರೆಸ್ ಗ್ಯಾರಂಟಿ ನಿಲ್ಲಿಸುತ್ತೇವೆ ಎಂದರೆ ಬಿಡಲ್ಲ: ಸಿಎಂ, ಡಿಸಿಎಂ ಬೀದಿಗೆ ಕರೆತಂದು ಕೇಳುತ್ತೇವೆ: ಜನಾರ್ದನ ರೆಡ್ಡಿ

ಕೊಪ್ಪಳ: ಕಾಂಗ್ರೆಸ್ ಐದು ಗ್ಯಾರಂಟಿ ನಿಲ್ಲಿಸುತ್ತೇವೆ ಎಂದರೆ ನಾವು ಬಿಡುವುದಿಲ್ಲ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯ ಕನಕಗಿರಿಯಲ್ಲಿ ಮಾತನಾಡಿದ ಅವರು, ಗ್ಯಾರಂಟಿ ನಿಲ್ಲಿಸಿದರೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರನ್ನು ಬೀದಿಗೆ ಕರೆತಂದು ಪ್ರಶ್ನಿಸುತ್ತೇವೆ. ಮೊದಲು ನಾನು ಒಬ್ಬನೇ ಇದ್ದೆ. ಇದೀಗ ನಮ್ಮ ಬಲ ಹೆಚ್ಚಾಗಿದೆ. ಗ್ಯಾರಂಟಿ ಹೆಸರಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಈಗ ಗ್ಯಾರಂಟಿಗಳನ್ನು ನಿಲ್ಲಿಸುತ್ತೇವೆ ಎಂದು ಹೇಳಲು ಹೇಗೆ ಬರುತ್ತೆ ಎಂದು ಪ್ರಶ್ನಿಸಿದ್ದಾರೆ.

ಸೋನಿಯಾ ಗಾಂಧಿ ಅವರು ಸೋಲ್ತೇನೆ ಅಂತ ತಿಳಿದು ರಾಜ್ಯಸಭೆಗೆ ಹೋಗಿದ್ದಾರೆ. ರಾಹುಲ್ ಗಾಂಧಿಗೂ ಗೆಲ್ಲುತ್ತೇನೆಯೋ ಇಲ್ಲವೋ ಎನ್ನುವ ಗಾಬರಿ ಇದೆ. ಪಲ್ಲಕ್ಕಿಯಲ್ಲಿ ದೇವರ ಮೂರ್ತಿ ಇದ್ದರೆ ನಾವು ಕೈ ಮುಗಿಯುತ್ತೇವೆ. ಬಿಜೆಪಿ ಪಲ್ಲಕ್ಕಿಯಲ್ಲಿ ಮೋದಿ ಎನ್ನುವ ಮೂರ್ತಿ ಇದೆ. ಆದರೆ, ಕಾಂಗ್ರೆಸ್ ಪಕ್ಷದ ಪಲ್ಲಕ್ಕಿಯಲ್ಲಿ ಯಾರ ಮೂರ್ತಿಯೂ ಇಲ್ಲ. ಕಾಂಗ್ರೆಸ್ ಗೆ ತಮ್ಮ ಪ್ರಧಾನಿ ಅಭ್ಯರ್ಥಿ ಘೋಷಿಸಲು ಧೈರ್ಯವಿಲ್ಲ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read