ಹಲವು ವರ್ಷಗಳ ಬಳಿಕ ಅಧಿಕೃತವಾಗಿ ಸಿಎಂ ಜನತಾ ದರ್ಶನ: ಅ.9 ರಂದು ಸಾರ್ವಜನಿಕರ ಅಹವಾಲು ಸ್ವೀಕಾರ

ಬೆಂಗಳೂರು: ಅ. 9 ರಂದು ಸೋಮವಾರ ಬೆಳಗ್ಗೆ 10.30 ರಿಂದ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಜನತಾದರ್ಶನ ನಡೆಸಲಿದ್ದಾರೆ.

ಮುಖ್ಯಮಂತ್ರಿಗಳ ಜನತಾದರ್ಶನ ಹಲವು ವರ್ಷಗಳ ನಂತರ ಅಧಿಕೃತವಾಗಿ ನಡೆಯುತ್ತಿದೆ. ಸಿಎಂ ಸಿದ್ದರಾಮಯ್ಯ ಅವರು ಅಂದು ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದು, ಸ್ಥಳದಲ್ಲೇ ಪರಿಹಾರ ಕಲ್ಪಿಸಿ ಕೊಡಲು ಸೂಚಿಸಲಿದ್ದಾರೆ.

ಜನಸಾಮಾನ್ಯರ ಸಮಸ್ಯೆ, ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ದೊರಕಿಸಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿಗಳ ನಿರ್ದೇಶನದಂತೆ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಕಳೆದ ತಿಂಗಳಿಂದ ಜಿಲ್ಲಾಮಟ್ಟದಲ್ಲಿ ಜನತಾದರ್ಶನ ಆರಂಭಿಸಿದ್ದಾರೆ. ಮುಂದಿನ ಹಂತದಲ್ಲಿ ತಾಲೂಕು ಮಟ್ಟದಲ್ಲಿಯೂ ಜನತಾದರ್ಶನ ನಡೆಸಲು ಸರ್ಕಾರದಿಂದ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ. ಜನತಾದರ್ಶನದಲ್ಲಿ ಜನಸಾಮಾನ್ಯರ ಸಮಸ್ಯೆ, ಅಹವಾಲುಗಳಿಗೆ ಸ್ಥಳೀಯ ಮಟ್ಟದಲ್ಲೇ ಪರಿಹಾರ ಕಲ್ಪಿಸಿಕೊಡಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read