BREAKING : ಜಟಾಪಟಿ ಪ್ರಕರಣ : ಸಂಸದ ಮುನಿಸ್ವಾಮಿ, ಶಾಸಕ S.N ನಾರಾಯಣಸ್ವಾಮಿ ವಿರುದ್ಧ ‘FIR’ ದಾಖಲು

ಬೆಂಗಳೂರು : ಜಟಾಪಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಮುನಿಸ್ವಾಮಿ, ಹಾಗೂ ಶಾಸಕ S.N ನಾರಾಯಣಸ್ವಾಮಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ಎಸ್ಎನ್ ನಾರಾಯಣಸ್ವಾಮಿ ನಡುವೆ ಜಟಾಪಟಿ ನಡೆದಿತ್ತು ಬಂಗಾರಪೇಟೆ ಶಾಸಕರ ದೂರಿನ ಅನ್ವಯ ಸಂಸದರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಸೆ.25ರಂದು ನಗರದ ಚನ್ನಯ್ಯ ರಂಗಮಂದಿರದಲ್ಲಿ ನಡೆದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಮುನಿಸ್ವಾಮಿ ಹಾಗೂ ನಾರಾಯಣಸ್ವಾಮಿ ನಡುವೆ ಯಾವುದೋ ವಿಚಾರಕ್ಕೆ ಗಲಾಟೆ ನಡೆದಿತ್ತು, ಇಬ್ಬರು ಪರಸ್ಪರ ಗಲಾಟೆ ಮಾಡಿಕೊಂಡು ಕೈ ಕೈ ಮಿಲಾಯಿಸುವ ಹಂತಕ್ಕೆ ಬಂದಿದ್ದರು.ಬಂಗಾರಪೇಟೆ ಶಾಸಕರ ದೂರಿನ ಮೇರೆಗೆ ಸಂಸದರ ಮೇಲೆ ಕೋಲಾರ ನಗರದ ಗರ್ಲ್ ಪೇಟೆ ಪೊಲೀಸ್ ಠಾಣೆಯಲ್ಲಿ ಸಂಸದ ಮುನಿಸ್ವಾಮಿ ವಿರುದ್ಧ ದೂರು ದಾಖಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read