ವಿಜಯನಗರ: ಜೆಸಿಬಿ ವಾಹನಕ್ಕೆ ವಿ.ಆರ್.ಎಲ್ ಬಸ್ ಡಿಕ್ಕಿ ಹೊಡೆದ ಪರಿಣಾಮ 8 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಮರಿಯಮ್ಮನಹಳ್ಳಿ ಬಳಿ ನಡೆದಿದೆ.
ಹಾರುವನಹಳ್ಳಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ ಹೋಗುತ್ತಿದ್ದ ಜೆಸಿಬಿ ವಾಹನಕ್ಕೆ ವಿ.ಆರ್.ಎಲ್ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದು ಪಲ್ಟಿಯಾಗಿ ಬಿದ್ದಿದೆ. ಜೆಸಿಬಿ ಕೂಡ ಕಂದಕಕ್ಕೆ ಬಿದ್ದಿದೆ. ಪರಿಣಾಮ 8 ಜನರು ಗಾಯಗೊಂಡಿದ್ದಾರೆ.
ಬಸ್ ಚಾಲಕ ಹಾಗೂ 6 ಪ್ರಯಾಣಿಕರು, ಜೆಸಿಬಿ ಚಾಲಕ ಹಾಗೂ ಇನ್ನೋರ್ವ ಸೇರಿದಂತೆ 8 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.