JDS-BJP ಒಂದಾಗಿರೋದು ಸತ್ಯ; ಒಟ್ಟಾಗಿ ಸರ್ಕಾರದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ; ಸಚಿವ ದಿನೇಶ್ ಗುಂಡೂರಾವ್ ಕಿಡಿ

ತುಮಕೂರು; ಜೆಡಿಎಸ್, ಬಿಜೆಪಿ ನಾಯಕರು ಸಿಂಗಾಪುರದಲ್ಲಿ ಸರ್ಕಾರದ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂಬ ಡಿಸಿಎಂ. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಧ್ವನಿಗೂಡಿಸಿದ್ದಾರೆ.

ತುಮಕೂರಿನಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಈ ಬಗ್ಗೆ ಮಾಹಿತಿ ಇರಬಹುದು. ಜೆಡಿಎಸ್, ಬಿಜೆಪಿ ಒಂದಾಗಿರುವುದಂತೂ ಸತ್ಯ. ಆದರೆ ನಾವು ಒಗ್ಗಟ್ಟಾಗಿದ್ದೇವೆ ಎಂದರು.

ಜೆಡಿಎಸ್, ಬಿಜೆಪಿಯವರು ಒಟ್ಟಾಗಿ ಸರ್ಕಾರದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ. ಆದರೆ ಅವರ ತಂತ್ರ ನಡೆಯಲ್ಲ. ರಾಜ್ಯದಲ್ಲಿ 5 ವರ್ಷಗಳ ಕಾಲ ನಾವು ಒಳ್ಳೆಯ ಆಡಳಿತ ನೀಡುತ್ತೇವೆ ಎಂದರು.

ಹಿಂದಿನ ಸರ್ಕಾರದಲ್ಲಿ ನಡೆದ ಅವ್ಯವಹಾರಗಳ ತನಿಖೆ ನಡೆಸಲಾಗುವುದು. ಕೋವಿಡ್ ಸಂದರ್ಭದಲ್ಲಿ ನಡೆದ ಅವ್ಯವಹಾರ, ಖರೀದಿ ಮಾಡಿದ ಔಷಧಿ, ಸಲಕರಣೆಗಳ ಬಗ್ಗೆಯೂ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read