ಮತದಾನ ದಿನ ಸಮೀಪಿಸುತ್ತಿದ್ದಂತೆ ಜೆಡಿಎಸ್ ಗೆ ಮತ್ತೊಂದು ಶಾಕ್

ಬೆಂಗಳೂರು: ವಿಧಾನಸಭೆ ಚುನಾವಣೆ ಮತದಾನ ದಿನ ಸಮೀಪಿಸುತ್ತಿದ್ದಂತೆ ಜೆಡಿಎಸ್ ಅಭ್ಯರ್ಥಿ ತಟಸ್ಥರಾಗಿದ್ದಾರೆ. ಇದರಿಂದಾಗಿ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆ ಶಾಕ್ ಉಂಟಾಗಿದೆ.

ಕ್ಷೇತ್ರದ ಅಭ್ಯರ್ಥಿಯಾಗಿರುವ ರಾಜಣ್ಣ ಪ್ರಚಾರದಲ್ಲಿ ತೊಡಗಿಸಿಕೊಳ್ಳದೇ ತಟಸ್ಥರಾಗಿ ಉಳಿದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ಹೇಳಲಾಗಿದೆ. ಈ ಮೊದಲು ಮಹಾಲಕ್ಷ್ಮಿ ಲೇಔಟ್ ಕ್ಷೇತ್ರ ಜೆಡಿಎಸ್ ಅಭ್ಯರ್ಥಿಯಾಗಿ ಡಾ. ಪ್ರಸನ್ನ ಅವರನ್ನು ಕಣಕ್ಕಿಳಿಸಲಾಗಿತ್ತು. ಅವರು ಉತ್ಸಾಹ ತೋರದ ಹಿನ್ನೆಲೆಯಲ್ಲಿ ಅಭ್ಯರ್ಥಿ ಬದಲಾವಣೆ ಮಾಡಿ ರಾಜಣ್ಣ ಅವರಿಗೆ ಟಿಕೆಟ್ ಕೊಡಲಾಗಿತ್ತು. ನಾಮಪತ್ರ ಸಲ್ಲಿಕೆ ಮಾಡಿದ್ದರೂ ರಾಜಣ್ಣ ಪ್ರಚಾರದಲ್ಲಿ ತೊಡಗಿಸಿಕೊಳ್ಳದೆ ಕಳೆದ ಎರಡು ಮೂರು ದಿನಗಳಿಂದ ಕಾರ್ಯಕರ್ತರ ಕೈಗೆ ಸಿಗುತ್ತಿಲ್ಲ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read