ಲೋಕಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಬಿಗ್ ಶಾಕ್: ಮೂವರು ನಾಯಕರು ಕಾಂಗ್ರೆಸ್ ಸೇರ್ಪಡೆ ಇಂದು

ಬೆಂಗಳೂರು: ಲೋಕಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ಗೆ ಹಿನ್ನಡೆಯಾಗಿದೆ. ಜೆಡಿಎಸ್ ನ ದಕ್ಷಿಣ ಶಿಕ್ಷಕರ ಮತಕ್ಷೇತ್ರದ ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ ಅವರು ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ಗುರುವಾರ ರಾಜೀನಾಮೆ ನೀಡಿದ್ದಾರೆ.

ಅವರ ರಾಜೀನಾಮೆಯಿಂದ ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಗೆ ಹಿನ್ನಡೆಯಾಗಿದೆ. ಬೆಂಗಳೂರಿನಿಂದ ವಿಮಾನದಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮರಿತಿಬ್ಬೇಗೌಡ ಅವರು ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಗೃಹ ಕಚೇರಿಯಲ್ಲಿ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಇಂದು ಮರೆತಿಬ್ಬೇಗೌಡ ಬೆಂಗಳೂರಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಅವರೊಂದಿಗೆ ಜೆಡಿಎಸ್ ಮುಖಂಡರಾದ ಎಂ. ಶ್ರೀನಿವಾಸ್, ಅಪ್ಪಾಜಿಗೌಡ ಕಾಂಗ್ರೆಸ್ ಗೆ ಸೇರ್ಪಡೆಯಾಗಲಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read