538 ಕೋಟಿ ರೂ. ವಂಚನೆ: ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅರೆಸ್ಟ್

ಮುಂಬೈ: 538 ಕೋಟಿ ರೂಪಾಯಿ ವಂಚನೆ ಪ್ರಕರಣದಲ್ಲಿ ಜೆಟ್ ಏರ್ ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಕೆನರಾ ಬ್ಯಾಂಕ್ ಗೆ 538 ಕೋಟಿ ರೂ. ವಂಚನೆ ಪ್ರಕರಣದಲ್ಲಿ ನರೇಶ್ ಗೋಯಲ್ ಅವರನ್ನು ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯ ಶುಕ್ರವಾರ ರಾತ್ರಿ ಬಂಧಿಸಿದೆ. ಕಳೆದ ಮೇ ನಲ್ಲಿ ಸಿಬಿಐ ದಾಖಲಿಸಿದ್ದ ಎಫ್ಐಆರ್ ಆಧರಿಸಿ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದಾರೆ.

ಗೋಯಲ್ ಅವರ ವಿರುದ್ಧ ವಂಚನೆ, ಕ್ರಿಮಿನಲ್ ಪ್ರೀತೂರಿ ಪ್ರಕರಣ ದಾಖಲಿಸಲಾಗಿತ್ತು. ಈ ಹಿಂದೆ ಸಿಬಿಐ ಅಧಿಕಾರಿಗಳು ನರೇಶ್ ಗೊಯಲ್ ಅವರ ನಿವಾಸ, ಕಚೇರಿ ಸೇರಿ ಮುಂಬೈನ 7 ಸ್ಥಳದಲ್ಲಿ ಪರಿಶೀಲನೆ ನಡೆಸಿದ್ದರು. ಈ ನಡುವೆ ಗೋಯಲ್ ಎರಡು ಬಾರಿ ಸಮನ್ಸ್ ಸ್ವೀಕರಿಸಿರಲಿಲ್ಲ. ಕೆನರಾ ಬ್ಯಾಂಕ್ ನಿಂದ 848 ಕೋಟಿ ರೂ. ಸಾಲ ಪಡೆದಿದ್ದ ಜೆಟ್ ವೇಸ್ ನ ನರೇಶ್ ಗೋಯಲ್ 538 ಕೋಟಿ ರೂ. ಸಾಲ ಮರುಪಾವತಿಸಿರಲಿಲ್ಲ. ಈ ಹಣವನ್ನು ಬೇರೆಡೆಗೆ ವರ್ಗಾಯಿಸಿದ್ದರು. ಈ ಸಂಬಂಧ ಕೆನರಾ ಬ್ಯಾಂಕ್ ಸಿಬಿಐಗೆ ದೂರು ನೀಡಿತ್ತು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read