ಕೆಲಸ ಸಿಗದೇ ಯುವ ಬಾಕ್ಸಿಂಗ್ ಪಟು ಆತ್ಮಹತ್ಯೆ

ಉಡುಪಿ: ಸರಿಯಾದ ಕೆಲಸ ಸಿಗದ ಚಿಂತೆಯಲ್ಲಿ ರಾಷ್ಟ್ರಮಟ್ಟದ ಯುವ ಬಾಕ್ಸಿಂಗ್ ಪಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮಲ್ಪೆ ಪಡುಕರೆಯ ಶಾಂತಿನಗರದಲ್ಲಿ ಮಂಗಳವಾರ ಬೆಳಗ್ಗೆ ಘಟನೆ ನಡೆದಿದೆ. ವೀರಜ್ ಮೆಂಡನ್(29) ಮೃತಪಟ್ಟವರು. ರಾಷ್ಟ್ರಮಟ್ಟದ ಬಾಕ್ಸಿಂಗ್ ಪಟು ಆಗಿದ್ದ ಅವರು ಸರಿಯಾದ ಕೆಲಸ ಸಿಗದೇ ಮಲ್ಪೆ ಬಂದರಿನಲ್ಲಿ ಮೀನುಗಾರಿಕೆ ಕೆಲಸ ಮಾಡಿಕೊಂಡಿದ್ದರು.

ಕ್ರೀಡಾಕೂಟದಡಿ ಕೆಲಸ ಸಿಗುವ ಭರವಸೆ ಹೊಂದಿದ್ದ ಅವರು ಸರಿಯಾದ ಕೆಲಸ ಸಿಗದ ಕಾರಣ ಖಿನ್ನತೆಗೆ ಒಳಗಾಗಿದ್ದರು. ಇದರಿಂದ ಮನನೊಂದು ಮನೆಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read