ದಾವಣಗೆರೆ: ನಿತ್ರಾಣದಿಂದ ರಸ್ತೆ ಬದಿಯಲ್ಲೇ ಬಿದ್ದಿದ್ದ ವೃದ್ದನಿಗೆ ಚಿಕಿತ್ಸೆ ಕೊಡಿಸಿ ನ್ಯಾಯಾಧೀಶ ಡಿ.ಕೆ. ವೇಲಾ ಮಾನವೀಯತೆ ಮೆರೆದಿದ್ದಾರೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಶನಿವಾರ ಮಧ್ಯಾಹ್ನ ಹರಿಹರ ನ್ಯಾಯಾಲಯಕ್ಕೆ ಆಗಮಿಸಿದ ಸಮಯದಲ್ಲಿ ದೊಡ್ಡಬಾತಿ ಸಮೀಪದ ಮಂದಾರ ಶಾಲೆಯ ಹತ್ತಿರದ ಮುಖ್ಯರಸ್ತೆಯಲ್ಲಿ ವೃದ್ದರೊಬ್ಬರು ನಿತ್ರಾಣಗೊಂಡು ರಸ್ತೆ ಬದಿಯಲ್ಲೇ ಬಿದ್ದಿದ್ದನ್ನು ಕಂಡು ಅವರನ್ನು ಹರಿಹರದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ವೃದ್ದನ ಹೆಸರು ಮತ್ತು ವಿಳಾಸವನ್ನು ವಿಚಾರಿಸಲಾಗಿ ಹರಪನಹಳ್ಳಿ ತಾಲ್ಲೂಕಿನ ತೆಲಗಿ ಗ್ರಾಮದ ಕರಿಯಪ್ಪ ಎಂದು ತಿಳಿದಿದೆ. ನ್ಯಾಯಾಧೀಶರ ಮಾನವೀಯ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.