BREAKING: ಕಟಿಂಗ್ ಶಾಪ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಡೂರು ಉದ್ವಿಗ್ನ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕಡೂರಿನ ಕಟಿಂಗ್ ಶಾಪ್ ನಲ್ಲಿ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ ನಡೆದಿದ್ದು, ರೆಡ್ ಹ್ಯಾಂಡಾಗಿ ಆರೋಪಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಲಾಗಿದೆ.

ಕಟಿಂಗ್ ಶಾಪ್ ಮಾಲೀಕ ರಾಜು ಎಂಬಾತ ಕೃತ್ಯವೆಸಗಿದ್ದು, ಕಡೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಮಾಹಿತಿ ತಿಳಿದ ಜನ ಕಟಿಂಗ್ ಶಾಪ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಕಲ್ಲು ತೂರಾಟದಲ್ಲಿ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಾಲೀಕ ರಾಜು ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದು, ರಾಜುನನ್ನು ಬಂಧಿಸಲಾಗಿದೆ. ಬೆಂಗಳೂರು -ಶಿವಮೊಗ್ಗ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಗಿದ್ದು, ಉದ್ವಿಗ್ನ ಸ್ಥಿತಿ ಉಂಟಾಗಿದೆ. ಪೊಲೀಸರು ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read