BREAKING : ರಾಜ್ಯದಲ್ಲಿ ಮತ್ತೊಂದು ATM ದರೋಡೆ : ಗ್ಯಾಸ್ ಕಟರ್ ಬಳಸಿ 18 ಲಕ್ಷ ದೋಚಿ ಪರಾರಿಯಾದ ಖದೀಮರು.!

ಕಲಬುರಗಿ: ರಾಜ್ಯದಲ್ಲಿ ಮತ್ತೊಂದು ಎಟಿಎಂ ದರೋಡೆ ಪ್ರಕರಣ ನಡೆದಿದೆ. ಎಸ್ ಬಿಐ ಎಟಿಎಂ ಒಡೆದು ೧೮ ಲಕ್ಷ ರೂಪಾಯಿ ದೋಚಿ ಕಳ್ಳರು ಪರಾರಿಯಾಗಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಕಲಬುರಗಿಯ ಪೂಜಾರಿ ಚೌಕ್ ನಲ್ಲಿ ಎಸ್ ಬಿಐ ಎಟಿಎಂನಲ್ಲಿ ಕಳ್ಳರು ಹಣ ದೋಚಿ ಎಸ್ಕೇಪ್ ಆಗಿದ್ದಾರೆ. ಗ್ಯಾಸ್ ಕಟರ್ ಬಳಸಿ ಎಟಿಎಂ ಯಂತ್ರ ಒಡೆದು 18 ಲಕ್ಷ ರೂಪಾಯಿ ಕಳ್ಳತನ ಮಾಡಲಾಗಿದೆ. ಇಂದು ನಸುಕಿನಜಾವ 3 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.

ನಿನ್ನೆ ಸಂಜೆ 6 ಗಂಟೆಗೆ ಬ್ಯಾಂಕ್ ಸಿಬ್ಬಂದಿ ಎಟಿಎಂಗೆ ಹಣ ಹಾಕಿದ್ದರು. ಭದ್ರತಾ ಸಿಬ್ಬಂದಿ ಇಲ್ಲದಿರುವುದನ್ನು ಗಮನಿಸಿ, ಸಿಸಿಕ್ಯಾಮರಾಗೆ ಬ್ಲ್ಯಾಕ್ ಸ್ಪ್ರೇ ಮಾಡಿ ದರೋಡೆಕೋರರು ಹಣ ದೋಚಿ ಪರಾರಿಯಾಗಿದ್ದಾರೆ. ಕಲಬುರಗಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read