BIG NEWS: ಕಲಬುರಗಿ-ಬೀದರ್ ಪ್ಯಾಸೇಂಜರ್ ರೈಲಿನ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು : ಆಶಾ ಕಾರ್ಯಕರ್ತೆಗೆ ಗಾಯ

ಕಲಬುರಗಿ: ಪ್ಯಾಸೇಂಜರ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿರುವ ಘಟನೆ ಕಲಬುರ್ಗಿಯ ಸುಲ್ತಾನಪುರ ರೈಲು ನಿಲ್ದಾಣದ ಬಳಿ ನಡೆದಿದೆ.

ಚಲಿಸುತ್ತಿದ್ದ ಕಲಬುರ್ಗಿ-ಬೀದರ್ ಪ್ಯಾಸೇಂಜರ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲುತೂರಾಟ ನಡೆಸಿದ್ದಾರೆ. ಘಟನೆಯಲ್ಲಿ ಓರ್ವ ಮಹಿಳೆಗೆ ಗಾಯಗಳಾಗಿವೆ. ಗಾಯಾಳುವನ್ನು ಸುಮಿತ್ರಾ ಎಂದು ಗುರುತಿಸಲಾಗಿದ್ದು, ಆಶಾ ಕಾರ್ಯಕರ್ತೆಯಾಗಿ ಕಾರನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಾಳು ಮಹಿಳೆಗೆ ರೈಲಿನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ನಿನೆಯಷ್ಟೇ ರಾಮನಗರದ ವಡೇರಹಳ್ಲಿ ಬಳಿ ವಂದೇಭಾರತ್ ಎಕ್ಸ್ ಪ್ರೆಸ್ ರೈಲಿನ ಮೇಲೆ ಕಲ್ಲು ತೂರಾಟ ಪ್ರಕರಣ ನಡೆದಿತ್ತು. ಇದರ ಬೆನ್ನಲ್ಲೇ ಈಗ ಕಲಬುರ್ಗಿ-ಬೀದರ್ ಪ್ಯಾಸೇಂಜರ್ ರೈಲಿನ ಮೇಲೆ ಕಲ್ಲುತೂರಾಟ ನಡೆದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read