BIG NEWS: ಕುಡಿದ ಮತ್ತಿನಲ್ಲಿ ನೀರಿಗೆ ಹಾರಿ ಯುವಕ ಸಾವು

ಕಲಬುರ್ಗಿ: ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕ ಕಂಠಪೂರ್ತಿ ಕುಡಿದು ಅಮಲಿನಲ್ಲಿ ನೀರಿಗೆ ಹಾರಿ ಸಾವನ್ನಪ್ಪಿರುವ ಘಟನೆ ಕಲಬುರ್ಗಿ ಜಿಲ್ಲೆಯ ಕಮಲಾಪುರ ತಾಲೂಕಿನ ಪಟವಾದ ಬ್ರಿಜ್ ಕಂ ಬ್ಯಾರೇಜ್ ನಲ್ಲಿ ನಡೆದಿದೆ.

ಹೈದರಾಬಾದ್ ಮೂಲದ 25 ವರ್ಷದ ಯುವಕ ಸಾಜಿದ್ ಮೃತ ವ್ಯಕ್ತಿ. ಸ್ನೇಹಿತರೊಂದಿಗೆ ಚೇಂಗಟಾದ ದರ್ಗಾಕ್ಕೆ ಬಂದಿದ್ದ. ದರ್ಗಾ ದರ್ಶನ ಬಳಿಕ ಮದ್ಯ ಸೇವಿಸಿದ್ದ. ಕುಡಿದ ಮತ್ತಿನಲ್ಲಿ ಬ್ರಿಜ್ ಕಂ ಬ್ಯಾರೇಜ್ ನಲ್ಲಿ ಈಜಲು ತೆರಳಿದ್ದ.

ಈಜುವಾಗಲೇ ನೀರಿನಲ್ಲಿ  ಮುಳುಗಿ ಸಾಜಿದ್ ಮೃತಪಟ್ಟಿದ್ದಾನೆ. ಸಾಜಿದ್ ಮುಳುಗುತ್ತಿರುವ ದೃಶ್ಯವನ್ನು ಆತನ ಸ್ನೇಹಿತರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಕಮಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read