ಕಮಲ್ ಹಾಸನ್ ಭಾವಚಿತ್ರಕ್ಕೆ ಬೆಂಕಿ: ಎಫ್ಐಆರ್ ದಾಖಲು

ಬೆಂಗಳೂರು: ನಟ ಕಮಲ್ ಹಾಸನ್ ಅವರ ಭಾವಚಿತ್ರಕ್ಕೆ ಬೆಂಕಿ ಹಾಕಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ಕರುನಾಡ ಯುವ ಸೇನೆ ಕಾರ್ಯಕರ್ತ ವಿ. ರವಿಕುಮಾರ್ ವಿರುದ್ಧ ಬೆಂಗಳೂರಿನ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಪೊಲೀಸ್ ಸಿಬ್ಬಂದಿ ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಸವೇಶ್ವರನಗರದ ಕೆ.ಹೆಚ್.ಬಿ. ರಸ್ತೆಯ ಹಾವನೂರು ಸರ್ಕಲ್ ಪವಿತ್ರ ಪ್ಯಾರಡೈಸ್ ಬಳಿ ಕಮಲ್ ಹಾಸನ್ ಅವರ ಭಾವಚಿತ್ರಕ್ಕೆ ಆರೋಪಿ ಬೆಂಕಿ ಹಾಕಿ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಣೆಗುರುವನಹಳ್ಳಿಯ ರವಿಕುಮಾರ್ ನನ್ನು ವಶಕ್ಕೆ ಪಡೆಯಲಾಗಿದೆ.

ತಮಿಳುನಿಂದ ಕನ್ನಡ ಹುಟ್ಟಿದೆ ಎಂದು ಕಮಲ್ ಹಾಸನ್ ಹೇಳಿಕೆ ನೀಡಿದ್ದು, ಅವರು ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೋರಬೇಕೆಂದು ವಿವಿಧ ಕನ್ನಡ ಸಂಘಟನೆಗಳು ಆಗ್ರಹಿಸಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read