ಕಂಬಳ ನಾಡ ಕ್ರೀಡೆಯಾಗಿ ಘೋಷಣೆ ಬಗ್ಗೆ ನಿರ್ಧಾರ ಶೀಘ್ರ

ಬೆಂಗಳೂರು: ಕರಾವಳಿಯ ಜನಪ್ರಿಯ ಕ್ರೀಡೆಯಾಗಿರುವ ಕಂಬಳವನ್ನು ರಾಜ್ಯ ಕ್ರೀಡೆ ಅಥವಾ ನಾಡ ಕ್ರೀಡೆಯಾಗಿ ಘೋಷಣೆ ಮಾಡುವ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ. ನಾಗೇಂದ್ರ ತಿಳಿಸಿದ್ದಾರೆ.

ವಿಧಾನಪರಿಷತ್ ನಲ್ಲಿ ಕಾಂಗ್ರೆಸ್ ಸದಸ್ಯ ಮಂಜುನಾಥ ಬಂಡಾರಿ ಅವರ ಗಮನ ಸೆಳೆಯುವ ಸೂಚನೆಗೆ ಕ್ರೀಡಾ ಸಚಿವ ನಾಗೇಂದ್ರ ಉತ್ತರ ನೀಡಿ, ರಾಜ್ಯ ಸರ್ಕಾರ ಕಂಬಳಕ್ಕೆ ಅತಿ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದೆ. ಕರಾವಳಿ ಭಾಗದ ಕಂಬಳ ಕ್ರೀಡೆಯ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸಲು ಬದ್ಧವಾಗಿದೆ. ಕಂಬಳವನ್ನು ರಾಜ್ಯ ಕ್ರೀಡೆ ಅಥವಾ ನಾಡ ಕ್ರೀಡೆಯಾಗಿ ಘೋಷಿಸುವ ಸಂಬಂಧ ಸದ್ಯದಲ್ಲೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read