BIG NEWS: ‘ಎಮರ್ಜೆನ್ಸಿ’ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ: ಕೇಂದ್ರ, ಸೆನ್ಸಾರ್ ಮಂಡಳಿಗೆ ಹೈಕೋರ್ಟ್ ನೋಟಿಸ್

ಭೋಪಾಲ್: ಕಂಗನಾ ರಣಾವತ್ ಅಭಿನಯದ ‘ಎಮರ್ಜೆನ್ಸಿ’ ಸಿನಿಮಾ ಬಿಡುಗಡೆಗೆ ತಡೆಯಾಜ್ಞೆ ಕೋರಿ ಅರ್ಜಿ ಮಧ್ಯಪ್ರದೇಶದ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

ಚಿತ್ರದಲ್ಲಿ ಸಿಖ್ ಸಮುದಾಯ ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿ ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಹಿನ್ನಲೆಯಲ್ಲಿ ಸಿನಿಮಾ ಪ್ರೊಡಕ್ಷನ್ಸ್, ಕೇಂದ್ರ ಸರ್ಕಾರ, ಸೆನ್ಸಾರ್ ಮಂಡಳಿಗೆ ಮಧ್ಯಪ್ರದೇಶ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ನಾಳೆ ಈ ಬಗ್ಗೆ ಮಧ್ಯಪ್ರದೇಶ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ. ‘ಎಮರ್ಜೆನ್ಸಿ’ ಸಿನಿಮಾ ಸೆಪ್ಟೆಂಬರ್ 6ರಂದು ತೆರೆ ಕಾಣಬೇಕಿತ್ತು, ಸೆನ್ಸಾರ್ ಮಂಡಳಿಯಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಹೀಗಾಗಿ ಸಿನಿಮಾ ಬಿಡುಗಡೆ ದಿನಾಂಕ ಮುಂದೂಡಲಾಗಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read