BIG NEWS: ಕನ್ನಡದಲ್ಲೇ ವೈದ್ಯರು ಔಷಧ ಚೀಟಿ ಬರೆದುಕೊಡಲು ಆದೇಶ

ಮಂಗಳೂರು: ಔಷಧ ಚೀಟಿಯನ್ನು ವೈದ್ಯರು ಕನ್ನಡದಲ್ಲಿಯೇ ಬರೆದುಕೊಡಲು ಸೂಚನೆ ನೀಡಲಾಗಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯ ವೈದ್ಯರು ಔಷಧ ಚೀಟಿಗಳನ್ನು ಕನ್ನಡದಲ್ಲಿಯೇ ಬರೆಯಲು ಆದೇಶ ಮಾಡುವಂತೆ ರಾಯಚೂರಿನಲ್ಲಿ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಇದನ್ನು ರಾಜ್ಯದಾದ್ಯಂತ ವಿಸ್ತರಿಸಲು ಸರ್ಕಾರದಿಂದ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

ವೈದ್ಯರಿಗೆ ಕನ್ನಡದಲ್ಲಿ ಔಷಧ ಚೀಟಿ ಬರೆಯಲು ಬಾರದಿದ್ದರೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ರಾಯಚೂರಿನಲ್ಲಿ 36 ಗಂಟೆಗಳ ಕಲಿಕಾ ಕೇಂದ್ರ ಆರಂಭಿಸುತ್ತೇವೆ. ಒಂದು ಕಡೆ ಕಲಿಕಾ ಕೇಂದ್ರ ಶುರುವಾದರೆ ಅದು ತನ್ನಷ್ಟಕ್ಕೆ ತಾನೇ ವಿಸ್ತರಣೆಯಾಗುತ್ತದೆ ಎಂದು ಹೇಳಿದ್ದಾರೆ.

ವೈದ್ಯರು ಕನ್ನಡ ವಿರೋಧಿಗಳಲ್ಲ, ಕನ್ನಡದಲ್ಲಿ ಬರೆಯಬೇಕು ಎನ್ನುವ ಪ್ರಜ್ಞೆ ಬಂದಿಲ್ಲ. ನಾವು ಒತ್ತಡ ಹಾಕಿದಲ್ಲಿ ವೈದ್ಯರು ಕನ್ನಡದಲ್ಲಿ ಔಷಧ ಚೀಟಿ ಬರೆದುಕೊಡುತ್ತಾರೆ. ಈ ನಿಟ್ಟಿನಲ್ಲಿ ಸರ್ಕಾರದಿಂದ ಆದೇಶ ಹೊರಡಿಸುತ್ತೇವೆ ಎಂದು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read