ಶುಭ ಸುದ್ದಿ: ರಾಜ್ಯೋತ್ಸವ ಅಂಗವಾಗಿ ತಿಂಗಳಿಡಿ ಶೇ. 50 ರಿಯಾಯಿತಿಯಲ್ಲಿ ಪುಸ್ತಕ ಮಾರಾಟ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಅಂಗವಾಗಿ ನವೆಂಬರ್ ತಿಂಗಳಿಡಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳಿಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.

ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆ, ಎಲ್ಲಾ ಜಿಲ್ಲೆಗಳಲ್ಲಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ, ಕನ್ನಡ ಪುಸ್ತಕ ಪ್ರಾಧಿಕಾರದಿಂದ ತೆರೆಯಲಾದ ಎಲ್ಲಾ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಗಳಲ್ಲಿ ರಿಯಾಯಿತಿ ಸೌಲಭ್ಯ ದೊರೆಯಲಿದೆ.

ಕನ್ನಡ ಪುಸ್ತಕ ಪ್ರಾಧಿಕಾರದ www.kannadapustakapradhikara.com ವೆಬ್ಸೈಟ್ ನಲ್ಲಿ ರಿಯಾಯಿತಿ ಲಭ್ಯವಿದ್ದು, ನಾಟಕಗಳು, ವ್ಯಕ್ತಿ ಚಿತ್ರಗಳು, ಅಲೆಮಾರಿ ಸಮುದಾಯ, ವೈದ್ಯಕೀಯ, ಪ್ರಾಚೀನ ಕನ್ನಡ ಸಾಹಿತ್ಯ, ಪರಿಸರ, ಜನಪದ, ಕೃಷಿ, ಹೀಗೆ ಹತ್ತು ಹಲವು ಪ್ರಕಾರಗಳ ಸಾಹಿತ್ಯ ಕೃತಿಗಳನ್ನು ಪ್ರಾಧಿಕಾರ ಮುದ್ರಿಸಿ ಪ್ರಕಟಿಸಿದೆ. ಜನಸಾಮಾನ್ಯರಿಗೆ ಸುಲಭ ದರದಲ್ಲಿ ಪುಸ್ತಕಗಳನ್ನು ತಲುಪಿಸುವ ಉದ್ದೇಶದೊಂದಿಗೆ ಶೇಕಡ 50ರಷ್ಟು ರಿಯಾಯಿತಿ ದರದಲ್ಲಿ ಮಾರಾಟ ಮಾಡಲಾಗುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read