ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂಬುದಕ್ಕೆ ಯಾವುದೇ ಕುರುಹುಗಳೂ ಇಲ್ಲದಂತೆ ಆಡಳಿತ ನಡೆಸುತ್ತಿದೆ ಕಾಂಗ್ರೆಸ್ ಸರ್ಕಾರ ಎಂದು ವಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.
ರಾಜ್ಯದಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವುದಕ್ಕೆ ಯಾವ ʼಗ್ಯಾರಂಟಿʼಯೂ ಇಲ್ಲವಾಗಿದೆ. ಕಳೆದ ನಾಲ್ಕು ತಿಂಗಳುಗಳಲ್ಲಿ 979 ಬಾಲಕಿಯರ ಮೇಲೆ ಅತ್ಯಾಚಾರ ವರದಿ ದಾಖಲಾಗಿರುವುದು ಇಡೀ ಕರ್ನಾಟಕವೇ ತಲೆ ತಗ್ಗಿಸುವ ಸಂಗತಿ. ಬೆಂಗಳೂರಿನಲ್ಲಿಯೇ ಅತಿಹೆಚ್ಚು 114 ಪ್ರಕರಣಗಳು ದಾಖಲಾಗಿವೆ. ಪೊಲೀಸ್ ಇಲಾಖೆಯಿಂದಲೇ ಮಾಹಿತಿ ಬಹಿರಂಗವಾಗಿದೆ.
ಆಕಸ್ಮಿಕ ಗೃಹಸಚಿವ ಡಾ.ಜಿ.ಪರಮೇಶ್ವರ ಅವರೇ ನಿಮ್ಮಿಂದ ಗೃಹಖಾತೆ ನಿರ್ವಹಿಸಲು ಜಪ್ಪಯ್ಯ ಅಂದರೂ ಸಾಧ್ಯವಿಲ್ಲ, ಮೊದಲು ರಾಜೀನಾಮೆ ಕೊಟ್ಟು ರಾಜ್ಯದ ಹೆಣ್ಣುಮಕ್ಕಳ ಮಾನ ಪ್ರಾಣ ಉಳಿಸಿ ಎಂದು ಆಗ್ರಹಿಸಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿದೆ ಎಂಬುದಕ್ಕೆ ಯಾವುದೇ ಕುರುಹುಗಳೂ ಇಲ್ಲದಂತೆ ಆಡಳಿತ ನಡೆಸುತ್ತಿದೆ ಕಾಂಗ್ರೆಸ್ ಸರ್ಕಾರ!
— BJP Karnataka (@BJP4Karnataka) June 11, 2025
ರಾಜ್ಯದಲ್ಲಿ ಮಹಿಳೆಯರು, ಹೆಣ್ಣುಮಕ್ಕಳು ನಿರ್ಭೀತಿಯಿಂದ ಓಡಾಡುವುದಕ್ಕೆ ಯಾವ ʼಗ್ಯಾರಂಟಿʼಯೂ ಇಲ್ಲವಾಗಿದೆ. ಕಳೆದ ನಾಲ್ಕು ತಿಂಗಳುಗಳಲ್ಲಿ 979 ಬಾಲಕಿಯರ ಮೇಲೆ ಅತ್ಯಾಚಾರ ವರದಿ ದಾಖಲಾಗಿರುವುದು ಇಡೀ… pic.twitter.com/I5z0UUoqPk