BREAKING : ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಿ ‘ಕಾವೇರಿ ವಿವಾದ’ ಬಗೆಹರಿಸಬೇಕು : ನಟ ಶಿವರಾಜ್ ಕುಮಾರ್ ಆಗ್ರಹ

ಬೆಂಗಳೂರು : ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಿ ‘ಕಾವೇರಿ ವಿವಾದ’ ಬಗೆಹರಿಸಬೇಕು ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ಇಂದು ಕಾವೇರಿ ಹೋರಾಟದಲ್ಲಿ ಭಾಗಿಯಾದ ನಟ ಶಿವರಾಜ್ ಕುಮಾರ್ ಮಾತನಾಡಿದರು. ಕಾವೇರಿ ವಿಚಾರದಲ್ಲಿ ಕರ್ನಾಟಕ, ತಮಿಳುನಾಡು ಸರ್ಕಾರ ಚರ್ಚೆ ಮಾಡಲಿ. ನಾವು ಆಯ್ಕೆ ಮಾಡಿರುವ ಸರ್ಕಾರ ವಿವಾದ ಬಗೆಹರಿಸಲು ಮುಂದಾಗಬೇಕು. ನಮ್ಮ ಅನುಕೂಲಕ್ಕಾಗಿ ಪರಿಸ್ಥಿತಿ ಲಾಭ ಪಡೆದುಕೊಳ್ಳಬಾರದು ಎಂದು ವಾಣಿಜ್ಯ ಮಂಡಳಿ ಹೋರಾಟದಲ್ಲಿ ನಟ ಶಿವರಾಜ್ ಕುಮಾರ್ ಹೇಳಿದರು.

ಕಾವೇರಿ ನೀರಿನ ಸಮಸ್ಯೆ ಈಗಿನದ್ದಲ್ಲ, ಮೊದಲಿನಿಂದ ಹೋರಾಡುತ್ತಿದ್ದೇವೆ. ನಾವು ಹೋರಾಟದಲ್ಲಿ ಭಾಗಿಯಾದರೆ ಕಾವೇರಿ ಸಮಸ್ಯೆ ಬಗೆಹರಿಯುತ್ತಾ? ನಾವು ಬಂದು ಮಾತನಾಡಿ ಹೋದರೇ ಸಮಸ್ಯೆ ಬಗೆಹರಿಯುತ್ತಾ? ಎಲ್ಲ ನಾಯಕರು ಕುಳಿತು ಮಾತನಾಡಿ ಚರ್ಚೆ ಮೂಲಕ ಬಗೆಹರಿಸಬೇಕು ಎಂದರು.ಇದೇ ವೇಳೆ ಮಾತನಾಡಿದ ನಟ ದುನಿಯಾ ವಿಜಯ್ ಕೇಂದ್ರ ಮತ್ತು ರಾಜ್ಯ ಸರ್ಕಾರ ಎರಡೂ ರೈತರ ಹಿತ ಕಾಪಾಡಬೇಕು ಎಂದು ಹೇಳಿದರು.
ತಮಿಳುನಾಡಿಗೆ ರಾಜ್ಯ ಸರ್ಕಾರ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಇಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ರಾಜ್ಯದ ಹಲವು ಕಡೆ ಪ್ರತಿಭಟನೆಗಳು ನಡೆಯುತ್ತಿದೆ. ಇಡೀ ಕರ್ನಾಟಕ ಸ್ತಬ್ದವಾಗಿದೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read