ಕರ್ನಾಟಕ ಬಂದ್ : ನಾಳೆ ನಿಗದಿಯಾಗಿದ್ದ ಶ್ರೀ ಕೃಷ್ಣದೇವರಾಯ ವಿವಿ ಪರೀಕ್ಷೆಗಳು ಮುಂದೂಡಿಕೆ

ಬಳ್ಳಾರಿ  : ಕರ್ನಾಟಕ ಬಂದ್ ಹಿನ್ನೆಲೆ ಸೆ.29 ರಂದು ನಾಳೆ ನಿಗದಿಯಾಗಿದ್ದ ಶ್ರೀ ಕೃಷ್ಣದೇವರಾಯ ವಿವಿ ಪರೀಕ್ಷೆಗಳು ಮುಂದೂಡಲಾಗಿದೆ ಎಂದು ವಿವಿ ಪ್ರಕಟಣೆ ಹೊರಡಿಸಿದೆ.

29.09.2023 ರಂದು ಕರ್ನಾಟಕ ಬಂದ್ ಇರುವ ಹಿನ್ನೆಲೆಯಲ್ಲಿ ಸದರಿ ದಿನದಂದು ನಡೆಯಬೇಕಿದ್ದ ಸ್ನಾತಕ ಪದವಿಯ 2ನೇ, 4ನೇ. 5ನೇ ಮತ್ತು 6ನೇ ಸೆಮಿಸ್ಟರ್ (CBCS/NEP) ಪರೀಕ್ಷೆಗಳನ್ನು ದಿನಾಂಕ: 08.10.2023ಕ್ಕೆ ಮುಂದೂಡಲಾಗಿದೆ.

ಮುಂದುವರೆದು, ಉಳಿದ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿವೆ. ಸದರಿ ಮಾಹಿತಿಯನ್ನು ತಮ್ಮ ಮಹಾವಿದ್ಯಾಲಯಗಳ ವಿದ್ಯಾರ್ಥಿಗಳ ಗಮನಕ್ಕೆ ತರಲು ಸೂಚಿಸಲಾಗಿದೆ ಎಂದು ಕುಲಸಚಿವರು (ಮೌಲ್ಯಮಾಪನ) ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಬಳ್ಳಾರಿ ಇವರು ಸುತ್ತೋಲೆ ಹೊರಡಿಸಿದ್ದಾರೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read