ಪ್ರಕರಣ ಬೇಧಿಸಲು ಹೋಗಿ ಒಡಿಶಾ ಪೊಲೀಸರಿಂದ ಅರೆಸ್ಟ್ ಆದ ಕರ್ನಾಟಕ ಪೊಲೀಸ್

ಬೆಂಗಳೂರು: ಕರ್ನಾಟಕ ಪೊಲೀಸ್ ಸಿಬ್ಬಂದಿಯನ್ನೇ ಒಡಿಶಾ ಪೊಲೀಸರು ಬಂಧಿಸಿ ಜೈಲಿಗಟ್ಟಿರುವ ಘಟನೆ ಬೆಳಕಿಗೆ ಬಂದಿದೆ.

ಗಾಂಜಾ ಪ್ರಕರಣದ ಬೆನ್ನತ್ತಿದ್ದ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಪೊಲೀಸರು ಒಡಿಶಾಗೆ ತೆರಳಿ ಆರೋಪಿಗಳ ಹುಡುಕಾಟ ನಡೆಸಿದ್ದರು. ಈ ವೇಳೆ ಜಿಗಣಿ ಠಾಣೆ ಕಾನ್ಸ್ ಟೇಬಲ್ ಆನಂದ್ ಎಂಬುವವರನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ.

ಹಿರಿಯ ಅಧಿಕಾರಿಗಳ ಆದೇಶದ ಮೇರೆಗೆ ಎ ಎಸ್ ಐ ಅಪ್ಪಾಜಿಗೌಡ, ಸಿಬ್ಬಂದಿ ಆನಂದ್, ಚನ್ನಬಸಪ್ಪ ಹಾಗೂ ದೀಪು ಎಂಬುವವರು ಒಡಿಶಾಗೆ ತೆರಳಿ ಕಾಡಿನಲ್ಲಿ ತೆರಳಿ ಪ್ರಕರಣ ಬೇಧಿಸಲು ಮುಂದಾಗಿದ್ದರು. ಗಾಂಜಾ ಹಿಡಿದು ಹೊರಬರುತ್ತಿದ್ದಂತೆ ಕಾನ್ಸ್ ಟೇಬಲ್ ಆನಂದ್ ಅವರನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ.

ನಾವು ಪೊಲೀಸರು ಎಂದು ಹೇಳಿದರೂ ಬಿಟ್ಟಿಲ್ಲ. ಇದರಿಂದ ಜಿಗಣಿ ಇನ್ಸ್ ಪೆಕ್ಟರ್ ಮಂಜುನಾಥ್ ಒಡಿಶಾಗೆ ತೆರಳಿದ್ದು, ಕಾನ್ಸ್ ಟೇಬಲ್ ಆನಂದ್ ಬಿಡುಗಡೆಗಾಗಿ ಕಾನೂನು ಪ್ರಕ್ರಿಯೆ ನಡೆಸಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read