‘ಕಾಟೇರ’ ಚಿತ್ರದ ಲಿರಿಕಲ್ ಸಾಂಗ್ ರಿಲೀಸ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾ ಸ್ಯಾಂಡಲ್ ವುಡ್ ನಲ್ಲಿ ಹೊಸ ದಾಖಲೆ ಬರೆದಿದ್ದು,ದರ್ಶನ್ ಅಭಿಮಾನಿಗಳು ಈ ಕಥೆ ಬರೆದವರಿಗೆ ದೊಡ್ಡ ಸಲಾಂ ಎನ್ನುತ್ತಿದ್ದಾರೆ. ಈ ಚಿತ್ರದ ‘ಪುಣ್ಯಾತ್ಮ’ ಎಂಬ ಲಿರಿಕಲ್ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಲಾಗಿದೆ. ಖ್ಯಾತ ಗಾಯಕ ವಿಜಯ್ ಪ್ರಕಾಶ್ ಧ್ವನಿಯಾಗಿದ್ದು, ವಿ. ಹರಿಕೃಷ್ಣ ಸಂಗೀತ ಸಂಯೋಜನೆ ನೀಡಿದ್ದಾರೆ ನಾಗಾರ್ಜುನ ಶರ್ಮ  ಅವರ ಸಾಹಿತ್ಯವಿದೆ.

ತರುಣ್ ಸುಧೀರ್ ನಿರ್ದೇಶನದ ಈ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿದಂತೆ ಆರಾಧನಾ, ಜಗಪತಿ ಬಾಬು, ಶೃತಿ, ಕುಮಾರ್ ಗೋವಿಂದ್, ವಿನೋದ್ ಕುಮಾರ್, ಮಾಸ್ಟರ್ ರೋಹಿತ್, ಅವಿನಾಶ್, ಶ್ರೀನಿವಾಸ ಮೂರ್ತಿ, ಹಾಗೂ ಪದ್ಮ  ವಸಂತಿ ತೆರೆ ಹಂಚಿಕೊಂಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಸುಧಾಕರ್ ಛಾಯಾಗ್ರಾಹಣವಿದ್ದು, ಮಾಸ್ತಿ ಡೈಲಾಗ್ ಬರೆದಿದ್ದಾರೆ. ರಾಕ್ ಲೈನ್ ವೆಂಕಟೇಶ್ ತಮ್ಮ ರಾಕ್ ಲೈನ್ ಎಂಟರ್ಟೈನ್ಮೆಂಟ್ ಬ್ಯಾನರ್ ನಡಿ ನಿರ್ಮಾಣ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read