ಕಾವೇರಿ ಕಿಚ್ಚು : ಬೆಂಗಳೂರಿನಲ್ಲಿ ಇಂದು ‘ವಾಟಾಳ್ ನಾಗರಾಜ್’ ನೇತೃತ್ವದಲ್ಲಿ ಪ್ರತಿಭಟನೆ

ಬೆಂಗಳೂರು : ಬೆಂಗಳೂರಲ್ಲಿ ಇಂದು ಕಾವೇರಿ ಕಿಚ್ಚು ಜೋರಾಗಿದ್ದು, ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಇಂದು ಮತ್ತೆ ಪ್ರತಿಭಟನೆ ನಡೆಯಲಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ಇಂದು ಮಧ್ಯಾಹ್ನ 12 ಗಂಟೆಗೆ ಮೈಸೂರು ಬ್ಯಾಂಕ್ ಸರ್ಕಲ್ ಬಳಿ ಧರಣಿ ನಡೆಯಲಿದ್ದು, ಡಾ.ರಾಜ್ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕರವೇ ರಾಜ್ಯಾಧ್ಯಕ್ಷರಾದ ಶಿವರಾಮೇಗೌಡ, ವಿವಿಧ ಕನ್ನಡಪರ ಸಂಘಟನೆಗಳು ಸಾಥ್ ನೀಡಲಿದೆ.ತಮಿಳುನಾಡಿಗೆ ನೀರು ಹರಿಸದಂತೆ ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಗಳ ಒಕ್ಕೂಟ ಸೆ.26ರ ಮಂಗಳವಾರ ಬೆಂಗಳೂರು ಬಂದ್ಗೆ ಕರೆ ನೀಡಿವೆ. ಹಾಗೆಯೇ ಕರ್ನಾಟಕ ಬಂದ್ ಗೆ ಕೂಡ ಕರೆ ನೀಡಲು ಸಂಘಟನೆಗಳು ನಿರ್ಧರಿಸಿದ್ದು, ಸೋಮವಾರ ನಾಳೆ ಕರ್ನಾಟಕ ಬಂದ್ ಬಗ್ಗೆ ಘೋಷಣೆ ಆಗಲಿದೆ.

 

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read