ಕಾಂಗ್ರೆಸ್ ಗೇ ಪಂಚ್ ನೀಡಿದ ಮಂಗಳೂರು ಮಾಜಿ ಮೇಯರ್ ಕವಿತಾ ಸನಿಲ್ ಬಿಜೆಪಿ ಸೇರ್ಪಡೆ

ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಆಗಿದ್ದಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕರಾಟೆ ಪಂಚ್ ನೀಡಿದ್ದ ಕವಿತಾ ಸನಿಲ್ ಬಿಜೆಪಿಗೆ ಸೇರುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ಪಂಚ್ ನೀಡಿದ್ದಾರೆ.

ಶನಿವಾರ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದ ಸಮಾರಂಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಕವಿತಾ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭ ದಲ್ಲಿ ರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್ ಉದ್ಘಾಟಿಸಿದ್ದರು. ಕರಾಟೆ ಪಟು ಕವಿತಾ ಸನಿಲ್ ಸಿಎಂಗೆ ಪಂಚ್ ನೀಡುವ ಮೂಲಕ ಎಲ್ಲರ ಗಮನ ಸೆಳೆದಿದ್ದರು.

ನಂತರ ಸಿದ್ದರಾಮಯ್ಯನವರ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ರಾಜಕೀಯ ಗುರು ಜನಾರ್ಧನ ಪೂಜಾರಿಯವರಿಗೆ ತಿಳಿಸಿ ಆಶೀರ್ವಾದ ಪಡೆದು ಬಿಜೆಪಿ ಸೇರಿದ್ದೇನೆ. ಅವರು ಒಳ್ಳೆಯದಾಗಲಿ ಎಂದು ಹೇಳಿದ್ದಾರೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read