BREAKING NEWS: ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ನಿವಾಸದಲ್ಲಿ ಬರೋಬ್ಬರಿ 1.2 ಕೋಟಿ ಹಣ ಜಪ್ತಿ ಮಾಡಿದ ಇಡಿ

ಬೆಂಗಳೂರು: ಕೆಐಎಡಿಬಿ ಅಧಿಕಾರಿಗಳ ಕಚೇರಿ ಹಾಗೂ ಮನೆಗಳ ಮೇಲೆ ಇಡಿ-ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ಮನೆಯಿಂದ ಕೋಟ್ಯಂತರ ರೂಪಾಯಿ ನಗದು ಹಣ ಜಪ್ತಿ ಮಾಡಲಾಗಿದೆ.

ಕೆಐಎಡಿಬಿ ಮುಖ್ಯ ಲೆಕ್ಕಾಧಿಕಾರಿ ವಾಣಿ ಅವರ ಮನೆ, ಕಚೇರಿ ಮೇಲೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ವಾಣಿ ಅವರ ಬೆಂಗಳೂರಿನ ರಾಜರಾಜೇಶ್ವರಿ ನಗರ ನಿವಾಸದ ಮೇಲೆ ದಾಳಿ ನಡೆಸಿದ ಅಧಿಕಾರಿಗಳು ಬರೋಬ್ಬರಿ 1.2 ಕೋಟಿ ಹಣ ಜಪ್ತಿ ಮಾಡಿದ್ದಾರೆ. ಅಲ್ಲದೇ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ.

ಆರ್.ಆರ್.ನಗರದಲ್ಲಿರುವ ಟೆಂಪೆಲ್ ಬೆಲ್ ಅಪಾರ್ಟ್ ಮೆಂಟ್ ನಲ್ಲಿ ವಾಣಿ ಅವರಿಗೆ ಸೇರಿದ ಫ್ಲಾಟ್ ನಲ್ಲಿ ಹಣ ಜಪ್ತಿ ಮಾಡಲಾಗಿದೆ ಎಂದು ತಿಳಿದುಬಂದಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read