ರಾಜ್ಯದ ರೈತರಿಗೆ ಸಿಹಿ ಸುದ್ದಿ: ಕೃಷಿ ಪಂಪ್ ಸೆಟ್ ಗಳಿಗೆ ಹಗಲಿನಲ್ಲೇ 7 ಗಂಟೆ ನಿರಂತರ ವಿದ್ಯುತ್

ಬೆಂಗಳೂರು: ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ವೇಳೆಯೇ ನಿರಂತರ 7 ಗಂಟೆ ವಿದ್ಯುತ್ ಸರಬರಾಜು ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.

ಗುರುವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಸಿ.ಬಿ. ಸುರೇಶ್ ಬಾಬು ಪ್ರಶ್ನೆಗೆ ಉತ್ತರ ನೀಡಿದ ಸಚಿವರು, ತಾಂತ್ರಿಕ ಸಾದ್ಯತೆ ಇರುವ ಉಪ ಕೇಂದ್ರಗಳಿಂದ ನಿರಂತರ 7 ಗಂಟೆ ತ್ರೀ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುವುದು. ತಾಂತ್ರಿಕ ಸಾಧ್ಯತೆ ಇಲ್ಲದ ಉಪ ಕೇಂದ್ರಗಳಲ್ಲಿ ಪಾಳಿಯಲ್ಲಿ ಹಗಲು ವೇಳೆ 4 ಗಂಟೆ, ರಾತ್ರಿ ವೇಳೆ 3 ಗಂಟೆ ಸೇರಿ ಒಟ್ಟು 7 ಗಂಟೆ 3 ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಅಂತರ್ಜಲ ಕುಸಿತದ ಕಾರಣ ಉಲ್ಲೇಖಿಸಿ ತ್ರೀ ಫೇಸ್ ವಿದ್ಯುತ್ ಸರಬರಾಜು ಸಮಯ ಬದಲಾವಣೆಯ ಕೋರಿಕೆ ಬಂದಿಲ್ಲ ಎಂದು ಸಚಿವ ಜಾರ್ಜ್ ಮಾಹಿತಿ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read