ಬಸ್ ಪ್ರಯಾಣಿಕರಿಗೆ KKRTC ಗುಡ್ ನ್ಯೂಸ್

ಬಳ್ಳಾರಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗ ವತಿಯಿಂದ ಬಳ್ಳಾರಿಯಿಂದ ಹುಬ್ಬಳ್ಳಿಗೆ ಜೂ.27 ರಿಂದ 2 ರಾಜಹಂಸ ಸಾರಿಗೆ ಬಸ್ ಕಾರ್ಯಾಚರಣೆ ಪ್ರಾರಂಭಿಸಲಾಗುತ್ತಿದೆ.

ಬಳ್ಳಾರಿ-ಹುಬ್ಬಳ್ಳಿ ವಯಾ ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ ಮಾರ್ಗದಲ್ಲಿ ಸೀಮಿತ ನಿಲುಗಡೆ ಕಲ್ಪಿಸಲಾಗಿದೆ.

ಬಸ್ ಸಂಚರಿಸುವ ವೇಳೆ:

ಬಳ್ಳಾರಿಯಿಂದ ಬೆಳಿಗ್ಗೆ 5.30 ಮತ್ತು 7 ಗಂಟೆಗೆ ಹೊರಟು, ಹುಬ್ಬಳ್ಳಿಗೆ ಬೆಳಿಗ್ಗೆ 10.30 ಮತ್ತು ಮಧ್ಯಾಹ್ನ 12 ಗಂಟೆಗೆ ತಲುಪಲಿದೆ.

ಹುಬ್ಬಳ್ಳಿಯಿಂದ ಬೆಳಿಗ್ಗೆ 11 ಮತ್ತು ಮಧ್ಯಾಹ್ನ 1 ಗಂಟೆಗೆ ಹೊರಟು ಬಳ್ಳಾರಿಗೆ ಸಂಜೆ 4  ಮತ್ತು 6 ಗಂಟೆಗೆ ತಲುಪಲಿದೆ.

ಟಿಕೆಟ್ ದರ 430 ರೂ. ಇರಲಿದೆ. ಮುಂಗಡ ಆಸನಗಳನ್ನು ಕಾಯ್ದಿರಿಸಲು www.ksrtc.in ಗೆ ಭೇಟಿ ನೀಡಬಹುದು. ರಾಜಹಂಸ ಸಾರಿಗೆ ಸೇವೆಯನ್ನು ಸಾರ್ವಜನಿಕ ಪ್ರಯಾಣಿಕರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಅವರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read